ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ರಾಜ್ಯಪಾಲರ ಥಾವರ್ ಚಂದ್ ಗೆಹಲೋಟ್

ಉಡುಪಿ: ಶ್ರೀಕೃಷ್ಣಮಠಕ್ಕೆ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ರವರು ಭೇಟಿ ನೀಡಿದ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

ದೇವರ ದರ್ಶನ ಪಡೆದ ರಾಜ್ಯಪಾಲರು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಗೆ ಹಾರ ಹಾಕಿ, ಫಲವಸ್ತುಗಳನ್ನು ನೀಡಿ ಗೌರವ ಸಲ್ಲಿಸಿದರು. ಪರ್ಯಾಯ ಶ್ರೀಪಾದರು ರಾಜ್ಯಪಾಲರಿಗೆ ಸ್ಮರಣಿಕೆ ಹಾಗೂ ಶ್ರೀಕೃಷ್ಣನ ಪ್ರಸಾದ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕೇರಂದ್ಲಾಜೆ ಹಾಗೂ ರಾಜ್ಯ ಸಚಿವರುಗಳಾದ ಸುನಿಲ್ ಕುಮಾರ್ , ಎಸ್. ಅಂಗಾರ, ಉಡುಪಿ ಶಾಸಕ ಕೆ.ರಘುಪತಿ ಭಟ್, ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಬಿ.ಜೆ.ಪಿಯ ಉದಯಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾ ರಾವ್, ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಪಾರುಪತ್ಯಗಾರರಾದ ಶ್ರೀನಿವಾಸ ಉಪಾಧ್ಯಾಯ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ವಾಸುದೇವ ಪೆರಂಪಳ್ಳಿ ಮೊದಲಾದವರು ಉಪಸ್ಥಿತರಿದ್ದರು.