ಬೈಂದೂರು ಹುಡುಗರ ಬೇಕರಿ ದುರಸ್ತಿಗೊಳಿಸಿ ಮಾನವೀಯತೆ ಮೆರೆದ ಡಾ. ಗೋವಿಂದ ಬಾಬು ಪೂಜಾರಿ

ಬೆಂಗಳೂರು: ಇತ್ತೀಚೆಗಷ್ಟೆ ಕುಂದನಹಳ್ಳಿ ಗೇಟ್ ಸಮೀಪ ಬೈಂದೂರಿನ ಬೇಕರಿ ಹುಡುಗರ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ನಡೆದ ಹೋರಾಟದಲ್ಲಿ ಭಾಗಿಯಾದ ಡಾ. ಗೋವಿಂದ ಬಾಬು ಪೂಜಾರಿಯವರು ಹಾನಿಗೊಳಗಾದ ಬೇಕರಿಯನ್ನು ದುರಸ್ತಿ ಮಾಡುವ ಭರವಸೆ ನೀಡಿದ್ದರು.

 

ಅವರ ಸೂಚನೆಯ ಮೇರೆಗೆ ಅವರ ಸಿಬ್ಬಂದಿ ವರ್ಗದವರು ಆದಿತ್ಯವಾರ ಹಾಗೂ ಸೋಮವಾರದಂದು ಬೇಕರಿ ಹುಡುಗರ ಜೊತೆಗಿದ್ದು ಹಾನಿಗೊಳಗಾದ ಉಪಕರಣಗಳನ್ನು ದುರಸ್ತಿಗೊಳಿಸಿ ಡಾ. ಗೋವಿಂದ ಬಾಬು ಪೂಜಾರಿಯವರ ಪರವಾಗಿ ಪೂಜೆ ಸಲ್ಲಿಸಿ ಬೇಕರಿಯನ್ನು ಪುನರಾಂಭಿಸಿದ್ದಾರೆ. ದೂರದ ಬೆಂಗಳೂರಿಗೆ ಬದುಕು ಕಟ್ಟಿಕೊಳ್ಳಲು ಬಂದವರು ಸಂಕಷ್ಟಕ್ಕೆ ಸಿಲುಕಿದಾಗ ತಮ್ಮ ಕಾರ್ಯದೊತ್ತಡದ ನಡುವೆಯೂ ತಕ್ಷಣ ಅವರ ಸಂಕಷ್ಟಕ್ಕೆ ನೆರವಾದ ಡಾ. ಗೋವಿಂದ ಬಾಬು ಪೂಜಾರಿಯವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.