ಉಡುಪಿ: ಪುತ್ತಿಗೆ ಮಠದ ಪರ್ಯಾಯವು (Puttige Paryaya) ಜ.18ರಂದು ನಡೆಯಲಿದ್ದು ಪರ್ಯಾಯ ಸಂಭ್ರಮದ ಪೂರ್ವಭಾವಿಯಾಗಿ ಕಳೆದ ಮೂರು ದಿನಗಳಿಂದ ವಿವಿಧ ಸಂಘಟನೆಗಳು ಹಾಗೂ ಗ್ರಾಮಗಳ ವತಿಯಿಂದ ಹಸಿರು ಹೊರೆ ಕಾಣಿಕೆ ಸಮರ್ಪಣಾ ಕಾರ್ಯ ನಡೆಯುತ್ತಿದ್ದು, ಗುರುವಾರದಂದು ಕರ್ನಾಟಕ ಬ್ಯಾಂಕ್ ವತಿಯಿಂದ ಹೊರೆಕಾಣಿಕೆ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾಂಕಿನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
![](https://udupixpress.com/wp-content/uploads/2024/01/image-20.png)
ಕರ್ನಾಟಕ ಬ್ಯಾಂಕ್ ಮಾತ್ರವಲ್ಲದೇ, ಪುತ್ತಿಗೆ ಮೂಲಮಠ, ಕಾರ್ಕಳ ತಾಲೂಕು, ಹೆಬ್ರಿ ತಾಲೂಕು, ಪೆರ್ಡೂರು ವಲಯ, ಆತ್ರಾಡಿ ವಲಯ, ಹಿರಿಯಡ್ಕ ವಲಯ, ಪರ್ಕಳ ವಲಯ, ಮಣಿಪಾಲದ ಗ್ರಾಮಸ್ಥರು, ಬಸ್ ಎಜೆಂಟ್ಗಳ ಸಂಘದ ವತಿಯಿಂದಲೂ ಹಸಿರು ಹೊರೆ ಕಾಣಿಕೆಯನ್ನು ಮೆರವಣಿಗೆಯಲ್ಲಿ ತಂದು ಅರ್ಪಿಸಲಾಯಿತು.
![](https://udupixpress.com/wp-content/uploads/2024/01/image-21.png)
ಮೆರವಣಿಗೆಯು ಜೋಡುಕಟ್ಟೆಯಿಂದ ಪ್ರಾರಂಭಗೊಂಡು ಡಯಾನ ವೃತ್ತದಿಂದ ಕೆ.ಎಂ.ಮಾರ್ಗ, ತ್ರಿವೇಣಿ ವೃತ್ತದ ಮೂಲಕ ಕನಕದಾಸ ರಸ್ತೆಯಲ್ಲಿ ಸಾಗಿ ರಥಬೀದಿ ಮೂಲಕ ಉಗ್ರಾಣಕ್ಕೆ ತೆರಳಿತು. ಪುತ್ತಿಗೆ ಮಠದ ವತಿಯಿಂದ ಹೊರೆ ಕಾಣಿಕೆ ತಂದ ಪ್ರಮುಖರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.