ಹತ್ರಾಸ್ ಗ್ಯಾಂಗ್ ರೇಪ್; ಸಂತ್ರಸ್ತೆಗೆ ಆರೋಪಿಯೊಂದಿಗೆ ಸಂಬಂಧ ಇತ್ತು: ಬಿಜೆಪಿ ನಾಯಕ

ಬಾರಾಬಂಕಿ: ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಯ ಚಾರಿತ್ರ್ಯ ಹರಣದ ಹೇಳಿಕೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಬಿಜೆಪಿ ನಾಯಕ ರಣ್ಜೀತ್ ಬಹದ್ದೂರ್ ಶ್ರೀವಾಸ್ತವ ‘ಸಂತ್ರಸ್ತ ಯುವತಿ ಆರೋಪಿಯೊಂದಿಗೆ ಸಂಬಂಧ ಹೊಂದಿದ್ದಳು’ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.

19 ವರ್ಷದ ದಲಿತ ಯುವತಿಯ ಮೇಲೆ ಭೀಕರ ದೌರ್ಜನ್ಯ ಎಸಗಿದ ಮೇಲ್ವರ್ಗದ ಯುವಕರು ಮುಗ್ಧರು. ಇದರಲ್ಲಿ ಯುವತಿಯೇ ದಾರಿತಪ್ಪಿದ್ದಳು ಎಂದು ಗಂಭೀರ ಆರೋಪ ಮಾಡಿದ್ದಾರೆ.

ಯುವತಿಯೇ ಆರೋಪಿಯನ್ನು ಬರಲು ಹೇಳಿದ್ದಳು. ಇಂತಹ ಹೆಣ್ಣುಮಕ್ಕಳೇ ಕಬ್ಬಿನ ಗದ್ದೆ ಹಾಗೂ ಅರಣ್ಯಗಳಲ್ಲಿ ಸಾವನ್ನಪ್ಪುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಾರಾಬಂಕಿಯ ಬಿಜೆಪಿ ನಾಯಕ ರಣ್ ಜೀತ್ ಬಹದ್ದೂರ್ ಶ್ರೀವಾಸ್ತವ ಅವರ ವಿರುದ್ಧ 44 ಕ್ರಿಮಿನಲ್ ಮೊಕದ್ದಮೆಗಳಿವೆ.