ಆರೋಗ್ಯ ಸಮತೋಲನಕ್ಕೆ ಯೋಗ ಸಾಧನ :ಡಾ.ಎನ್.ಬಿ ವಿಜಯ ಬಲ್ಲಾಳ್

ಉಡುಪಿ :ಭಾರತೀಯ ಸಂಸ್ಕøತಿ ಆರೋಗ್ಯಕ್ಕೆ ಹಲವಾರು ಕೊಡುಗೆಗಳನ್ನು ನೀಡಿದೆ. ಆರೋಗ್ಯವನ್ನು ಸಮತೋಲನದಲ್ಲಿಡಲು ಯೋಗ ಬಹು ಮುಖ್ಯ ಸಾಧನ ಎಂದು ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಮ್ಯಾನೆಜಿಂಗ್ ಟ್ರಸ್ಟಿ ಡಾ.ಎನ್.ಬಿ ವಿಜಯ ಬಲ್ಲಾಳ್ ತಿಳಿಸಿದ್ದಾರೆ.

     ಅವರು ಶುಕ್ರವಾರ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ರೆಡ್‍ಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

     ಆರೋಗ್ಯವಿಲ್ಲ ಎಂದರೆ ಜೀವನದಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ಯೋಗದ ಪ್ರಾಮುಖ್ಯತೆಯನ್ನು ಅರಿತು ಯೋಗವನ್ನು ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯೋಗವನ್ನು ಜೀವನದ ಜೊತೆ ಜೊತೆಗೆ ನಡೆಸಿಕೊಂಡು ಹೋಗಬೇಕು. ಯೋಗವನ್ನು ಮಾಡುವಾಗ ಮನಸ್ಸನ್ನು ಸಂಪೂರ್ಣ ತೊಡಗಿಸಿಕೊಳ್ಳಬೇಕು. ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಸುವ ಜೊತೆಗೆ ಮನಸ್ಸಿನಲ್ಲಿ ಧನಾತ್ಮಕ ಅಂಶಗಳು ಹೆಚ್ಚುತ್ತದೆ ಎಂದರು.

     ಕಾರ್ಯಕ್ರಮದಲ್ಲಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಮ್ಯಾನೆಜಿಂಗ್ ಕಿಮಿಟಿ ಮೆಂಬರ್ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿದರು. ಯೋಗ ಶಿಕ್ಷಕಿ ರಾಧಿಕಾ ರವಿರಾಜ್ ಮಾತನಾಡಿದರು.

ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾಘಟಕದ  ಸಭಾಪತಿ ಡಾ. ಉಮೇಶ್ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಗ ಶಿಕ್ಷಕಿ ರಾಧಿಕಾ ರವಿರಾಜ್ ಉಡುಪಿಯ ಧನ್ವಂತರಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಯೋಗಭ್ಯಾಸ ಮಾಡಿಸಿದರು.

     ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಯುವರೆಡ್ ಕ್ರಾಸ್ ಘಟಕದ ಅಧ್ಯಕ್ಷ ಜಯರಾಮ್ ಆಚಾರ್ಯ ಸಾಲಿಗ್ರಾಮ ನಿರೂಪಿಸಿದರು, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕದ ಗೌರವ ಖಜಾಂಚಿ ಟಿ ಚಂದ್ರಶೇಖರ್ ವಂದಿಸಿದರು.