ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಮಾಹಿತಿ ಕಾರ್ಯಾಗಾರ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಕಾಡುವ ಆರೋಗ್ಯ ಸಮಸ್ಯೆಯ ಕುರಿತು ಮಾಹಿತಿ ಕಾರ್ಯಾಗಾರವನ್ನು ಸೋಮವಾರ ಆಯೋಜಿಸಲಾಗಿತ್ತು. ವಿದ್ಯಾರ್ಥಿನಿಯರನ್ನು ಕಾಡುವ ಆರೋಗ್ಯ ಸಮಸ್ಯೆ ಹಾಗೂ ಯಾವ ರೀತಿಯ ಜೀವನ ಶೈಲಿ ರೂಢಿಸಿಕೊಳ್ಳುವುದರ ಮೂಲಕ ಇವುಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎನ್ನುವುದನ್ನು ಕುಂದಾಪುರ ಗ್ರಾಮೀಣ ಆಯುರ್ವೇದ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ವೈದ್ಯೆ ಡಾ. ವಾಣಿಶ್ರೀ ಐತಾಳ ಮನಮುಟ್ಟುವಂತೆ ವಿವರಿಸಿದರು.

ಕಾಲೇಜಿನ ಉಪ ಪ್ರಾಂಶುಪಾಲೆ ಶ್ರೀಮತಿ ಮಮತಾ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಭೌತ ಶಾಸ್ತ್ರ ಉಪನ್ಯಾಸಕಿ ಗಾಯತ್ರಿ ಭಟ್ ಸ್ವಾಗತಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಸ್ಮಿತಾ ಶೆಟ್ಟಿ ಅತಿಥಿಯನ್ನು ಪರಿಚಯಿಸಿದರು. ಸಂಖ್ಯಾ ಶಾಸ್ತ್ರ ಉಪನ್ಯಾಸಕಿ ಮೇಘನಾ ಹೆಬ್ಬಾರ್ ವಂದಿಸಿದರು.ಆಂಗ್ಲ ಭಾಷಾ ಉಪನ್ಯಾಸಕಿ ಸುಪ್ರೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.