ಚುರುಕುಗೊಂಡಿದೆ ಮುಂಗಾರು: ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಕರಾವಳಿ ಹಾಗೂ ಒಳನಾಡಿನಲ್ಲಿ  ಜುಲೈ 9, 10ರಂದು ವ್ಯಾಪಕ ಮಳೆ ಸುರಿಯುವ ನೀರಿಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬಿ ಸಮುದ್ರದಿಂದ ರಾಜ್ಯದ ಕರಾವಳಿಯೆಡೆಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವ ಹಿನ್ನಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾದ್ಯತೆ ಇದ್ದು, ಆ ಭಾಗಗಳಲ್ಲಿ ಎರಡೂ ದಿನಗಳವರಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.  ಮೀನುಗಾರರು ಮುಂದಿನ ಐದು ದಿನಗಳವರೆಗೆ ಕಡಲಿಗೆ ಇಳಿಯದಂತೆ ಇಲಾಖೆಯು ಎಚ್ಚರಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ತಿಳಿಸಿದೆ.