ಭಾರಿ ಮಳೆ ಹಿನ್ನೆಲೆ: ಉಡುಪಿ ಡಿಸಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡ ಸಿಎಂ

ಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ ಭಾರಿ ಗಾಳಿಮಳೆ ಸುರಿಯುತ್ತಿರುವ ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಉಡುಪಿ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಪ್ರವಾಹ ಉಂಟಾಗುವ ಭೀತಿ ಇದ್ದಲ್ಲಿ ಸೂಕ್ತ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಹಾಗೂ ಮಳೆ ಹಾನಿಗೆ ಸೂಕ್ತ ಪರಿಹಾರ ನೀಡಿ ಎಂದು ಡಿಸಿ ಜಿ. ಜಗದೀಶ್ ಅವರಿಗೆ ಸೂಚಿಸಿದ್ದಾರೆ.