ಹೆಬ್ರಿ: ಅರಣ್ಯದಲ್ಲಿ ಯುವಕನ್ನೊಬ್ಬನ ಶವ ಪತ್ತೆ

ಉಡುಪಿ: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಯುವಕನೊಬ್ಬನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಮೃತ ವ್ಯಕ್ತಿ ಶಿವ ಕುಮಾರ್ (28 ) ಮುದ್ರಾಡಿ ಗ್ರಾಮದ ಜಕ್ಕನಾಡಿ ಪಂಚಮಿ ನಿವಾಸಿ ಸಂಜೀವ ಸೇರಿಗಾರ ಅವರ ಮಗ. ಇವರು ಮೇ 13ರಂದು ಬೆಳಗ್ಗೆ 10 ಗಂಟೆಗೆ ತಾವು ಕೆಲಸ ಮಾಡುತ್ತಿದ್ದ ಹೆಬ್ರಿ ಗ್ರಾಮದ ಜರವತ್ತು ಎಂಬಲ್ಲಿಂದ ಕಾಣೆಯಾಗಿದ್ದರು.
ಶನಿವಾರ ಸಂಜೆ ಹೆಬ್ರಿ ಗ್ರಾಮದ ಜರವತ್ತು ಅರಣ್ಯ ಪ್ರದೇಶದ ನಡುವೆ ಶಿವ ಕುಮಾರ್ ಅವರ ಮೃತದೇಹವು ಪತ್ತೆಯಾಗಿದೆ. ಅಂಗಾತನೆ ಮಲಗಿದ ಸ್ಥಿತಿಯಲ್ಲಿ ದೇಹವು ಕೊಳೆತು ಹೋಗಿದೆ. ಮೃತರ ಕುತ್ತಿಗೆಯಲ್ಲಿ ಬೈರಾಸು ಸುತ್ತಿಕೊಂಡ ಸ್ಥಿತಿಯಲ್ಲಿರುವುದರಿಂದ ಮೃತರ ಮರಣದಲ್ಲಿ ಸಂಶಯ ಇರುವುದಾಗಿ ಸಹೋದರ ಪ್ರವೀಣ್ ಸೇರಿಗಾರ ನೀಡಿದ ದೂರಿನಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.