ಕಬ್ಬಿನಾಲೆ ಮತ್ತಾವು ಸೇತುವೆ ಪರಿಶೀಲನೆ

ಹೆಬ್ರಿ: ತಾಲೂಕಿನ ಮುದ್ರಾಡಿ ಗ್ರಾ ಪಂ ವ್ಯಾಪ್ತಿಯ ಕಬ್ಬಿನಾಲೆ ಗ್ರಾಮದ ಮುಡ್ಲಾಂತು ರಸ್ತೆಯ ಮತ್ತಾವು ಸೇತುವೆ ಪಾರಿಕಲ್ಲು ವಿದ್ಯುತ್ ಸಂಪರ್ಕ ರಸ್ತೆ ಕುರಿತಾಗಿ ಐಟಿಡಿಪಿ ಸಮನ್ವಯಾಧಿಕಾರಿ ಹಾಗೂ ವಲಯ ಅರಣ್ಯ ಅಧಿಕಾರಿಯವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ ಗೌಡ ಈದು, ಸಂಘಟನಾ ಕಾರ್ಯದರ್ಶಿ ಗಂಗಾಧರ ಗೌಡ ಈದು, ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಉಪಾಧ್ಯಕ್ಷ ಸುಂದರ ಗೌಡ ಮುದ್ರಾಡಿ, ಮಲೆಕುಡಿಯ ಸಂಘ ಹೆಬ್ರಿ ತಾಲೂಕು ಸಮಿತಿಯ ಅಧ್ಯಕ್ಷ ಉದಯ್ ಗೌಡ ಬಲ್ಲಾಡಿ, ಸಂತೋಷ್ ಕುಮಾರ್ ಶೆಟ್ಟಿ ಮತ್ತಿತರು ಉಪಸ್ಥಿತಿದ್ದರು.