ಗೋ ಕಳ್ಳರಿಗೆ ಸಹಾಯ: ಬಜರಂಗದಳದ ಮಾಜಿ ಸಂಚಾಲಕ ಅರೆಸ್ಟ್

ಉಡುಪಿ: ಗೋವು ಕಳ್ಳರಿಗೆ ನೆರವು ನೀಡಿ ಹಣ ಪಡೆದ ಆರೋಪದಡಿ ಕಾರ್ಕಳ ನಗರ ಭಜರಂಗದಳದ ಮಾಜಿ ಸಂಚಾಲಕ ಅನಿಲ್ ಪ್ರಭು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಗೋವುಗಳನ್ನು ಕಳ್ಳತನ ಮಾಡಿದ ಆರೋಪಿಗಳು ನೀಡಿದ ಮಾಹಿತಿಯನ್ನು ಆಧರಿಸಿ ಕಾರ್ಕಳ ಪೊಲೀಸರು ಈತನನ್ನು ಬಂಧನ ಮಾಡಿದ್ದಾರೆ.

‘ನಿಮಗೆ ಪೊಲೀಸರಿಂದ ಯಾವುದೇ ರೀತಿಯ ತೊಂದರೆ ಆಗಲ್ಲ. ಅವರಿಂದ ನಿಮ್ಮನ್ನು ಪಾರು ಮಾಡುತ್ತೇನೆಂದು ಅನಿಲ್ ಗೋಕಳ್ಳರಿಗೆ ಭರವಸೆ ನೀಡಿದ್ದ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾರ್ಕಳದಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮ ದನದ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ವಿಷಯ ಗೊತ್ತಾಗಿದೆ. ಆರೋಪಿ ಅನಿಲ್ ಪ್ರಭು ಈ ಹಿಂದೆ ಕಾರ್ಕಳ ಭಜರಂಗದಳದ ಸಂಚಾಲಕರಾಗಿದ್ದರು ಎಂದು ತಿಳಿದುಬಂದಿದೆ.