ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಸಂಪರ್ಕಿಸಲು ಸಹಾಯವಾಣಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಮುಂಜಾಗ್ರತಾ ಹಾಗೂ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ಮುಂಗಾರು ಮಳೆಯ ಸಂದರ್ಭದಲ್ಲಿ ಯಾವುದೇ ಅನಾನುಕೂಲವಾದಲ್ಲಿ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ: 1077, ನಗರಸಭೆಯ ಸಹಾಯವಾಣಿ ಸಂಖ್ಯೆ: 0820-2520306, ಮೆಸ್ಕಾಂ ಸಹಾಯವಾಣಿ ಸಂಖ್ಯೆ: 1912, ನಗರಸಭೆ ಪೌರಾಯುಕ್ತ ರಮೇಶ್ ಪಿ ನಾಯ್ಕ್ ಮೊ.ನಂ: 9448120430, ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಯಶವಂತ ಪ್ರಭು ಮೊ.ನಂ: 9743412642 ಮತ್ತು 6362351481, ನಗರಸಭೆಯ ಪರಿಸರ ಅಭಿಯಂತರ ಸ್ನೇಹಾ ಕೆ.ಎಸ್ ಮೊ.ನಂ: 9164397765 ಹಾಗೂ ನಗರಸಭೆಯ ಕಂದಾಯ ಅಧಿಕಾರಿ ಸಂತೋಷ ಡಿ ಮೊ.ನಂ: 9449747209 ಅನ್ನು 24*7 ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.