ಹೆಮ್ಮಾಡಿ: ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಕುಂದಾಪುರ: ಹೆಮ್ಮಾಡಿಯ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಆಗಸ್ಟ್ 26ರಂದು ಸಾಧು ಎಸ್ ಬಿಲ್ಲವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದಲ್ಲಿ ನಡೆದ ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಅಧ್ಯಕ್ಷರಾದ ಸಾಧು ಎಸ್ ಬಿಲ್ಲವ ಇವರು ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಶೇ.10 ರ ಡಿವಿಡೆಂಟ್ ಘೋಷಣೆ ಮಾಡಲಾಯಿತು.

ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಣೆ, ಸನ್ಮಾನ ಕಾರ್ಯಕ್ರಮ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳು ನೆರವೇರಿತು.

ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಕ್ರೀಡಾ ಸಾಧಕ ವಿದ್ಯಾರ್ಥಿಗಳನ್ನು ಕೂಡ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಕುಸುಮ ಆರ್ ಮೊಗವೀರ ನಿರ್ದೇಶಕರುಗಳಾದ ಜೀತಾ ಕ್ರಾಸ್ತ, ಪದ್ಮಾವತಿ ಶೆಟ್ಟಿ, ಶೋಭಾ ಜಿ ಪುತ್ರನ್, ಗುಣರತ್ನ ಆರ್, ಜಯಲಕ್ಷ್ಮಿ ಎಸ್ ರಾವ್, ಹಾಸ್ಯ ಬಾನು, ಭಾರತೀ, ಶಾರದಾ, ಪ್ರತಿಮಾ ವರ್ಗೀಸ್, ಲೀಲಾವತಿ ಗಾಣಿಗ ನೇತ್ರಾವತಿ ಸಹ ನಿರ್ದೇಶಕರಾದ ಗೀತಾ ಡಿ.ಎಚ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.