ಕುಂದಾಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿಪರ ಕೋರ್ಸ್ಗಳ (ಕೆ.ಸಿ.ಇ.ಟಿ -2025)ಪ್ರವೇಶ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿನ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ರ್ಯಾಂಕ್ ಗಳಿಸಿ ಅಪ್ರತಿಮ ಸಾಧನೆ ಮಾಡಿದ್ದಾರೆ.
ಕಾಲೇಜಿನ ವಿದ್ಯಾರ್ಥಿ ಆಕಾಶ್ ಹೆಬ್ಬಾರ್, ವೆಟರ್ನರಿ ಸೈನ್ಸ್ 999 ನೇ ರ್ಯಾಂಕ್, ನ್ಯಾಚುರೋಪತಿ, ಮತ್ತು ಸೈನ್ಸ್ನಲ್ಲಿ 932 ಹಾಗೂ ನರ್ಸಿಂಗ್ ನಲ್ಲಿ 1009 ಬಿ ಫಾರ್ಮ್ 1,382ನೇ ರ್ಯಾಂಕ್ ಪಡೆದು ಅದ್ವಿತೀಯ ಸಾಧನೆ ಮಾಡಿದ್ದಾರೆ.
ನಿಶ್ಚಿತ್ ಎಂಜಿನಿಯರಿಂಗ್ 1638ನೇ ರ್ಯಾಂಕ್, ಶೋಭಿತ್ ಬಿ.ಎಸ್ಸಿ ಅಗ್ರಿ 2,006 ನೇ ರ್ಯಾಂಕ್, ಗಿರೀಶ್ ಪೈ ಎಂಜಿನಿಯಗ್ 2,159ನೇ ರ್ಯಾಂಕ್, ಚಿರಂತನ್ ಎಂಜಿನಿಯರಿಂಗ್ 2219 ನೇ
ರ್ಯಾಂಕ್ ಶಶಾಂಕ್ ಎಂಜಿನಿಯರಿಂಗ್ 2219 ನೇ ರಾಂಕ್ ಪಡೆಯುವುದರ ಮೂಲಕ ಶ್ರೇಷ್ಠ ಸಾಧನೆ ಮಾಡಿದ್ದಾರೆ. ರಾಜ್ಯದ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯಲು ಅರ್ಹರಾಗಿದ್ದಾರೆ. ಪರೀಕ್ಷೆ ಬರೆದ 85 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ಹತ್ತು ಸಾವಿರದ ಒಳಗೆ ರ್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಿನ್ಸಿಪಾಲ್, ಬೋಧಕ, ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿಗಳ ರಾಜ್ಯಮಟ್ಟದಲ್ಲಿ ಸಾಧನೆ:
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಆರಂಭದ ತೃತೀಯ ವರ್ಷದಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸುವ ಮೂಲಕ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.ಗ್ರಾಮೀಣ ಪ್ರದೇಶದಲ್ಲಿ ಆರಂಭಗೊಂಡಿರುವ ಹೆಮ್ಮಾಡಿ ಜನತಾ ಕಾಲೇಜು ಬಡ ವರ್ಗದ ಕುಟುಂಬದ ಮಕ್ಕಳಿಗೆ ಆಶಾಕಿರಣವಾಗಿದೆ.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ:
ಕೃಷಿ ಕೂಲಿ ಕಾರ್ಮಿಕ ವರ್ಗದ ಬಡ
ಕುಟುಂಬದ ಮಕ್ಕಳು, ಆರ್ಥಿಕವಾಗಿ ಅಶಕ್ತವಾಗಿರುವ ಸಾಮಾನ್ಯ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಬೇಕು. ಸರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸಿ ಉತ್ತಮ ರೀತಿಯಲ್ಲಿ ಜೀವನ ಕಟ್ಟಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಶಿಕ್ಷಣ ಸಂಸ್ಥೆ ಆರಂಭಿಸಲಾಗಿದೆ. ನಮ್ಮ ಉದ್ದೇಶ ಈಡೇರಿದೆ ಎನ್ನುವ ಖುಷಿ ಇದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಸಾಧನೆ ಮಾಡುತ್ತಿರುವದು ತುಂಬಾ ಹೆಮ್ಮೆಯ ವಿಷಯವಾಗಿದೆ.
-ಗಣೇಶ್ ಮೊಗವೀರ
ಅಧ್ಯಕ್ಷರು, ಪ್ರಿನ್ಸಿಪಾಲ್ ಜನತಾ ಪಪೂ ಕಾಲೇಜು, ಹೆಮ್ಮಾಡಿ












