ಹಿರಿಯಡಕ ಶ್ರೀ ವೀರಭದ್ರಸ್ವಾಮಿ ದೇವಸ್ಥಾನ, ಏ.19: ಸಿರಿಜಾತ್ರೆ, ಏ.22: ರಥೋತ್ಸವ

ಹಿರಿಯಡಕ: ಪೌರಾಣಿಕ ಹಿನ್ನೆಲೆಯುಳ್ಳ ಉಡುಪಿ ತಾಲೂಕಿನ ಹಿರಿಯಡಕದ ಮಹತೋಭಾರ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ಎ. 9ರಂದು  ವಾರ್ಷಿಕಮಹೋತ್ಸವ ಪ್ರಾರಂಭಗೊಂಡಿದ್ದು, ಏ. 24ರ ವರೆಗೆ ಜರಗಲಿದೆ. ಏ.19ರಂದು ಸಿರಿಜಾತ್ರೆ, ಏ. 22ರಂದು ಶ್ರೀ ಮನ್ಮಹಾರಥೋತ್ಸವ ನಡೆಯಲಿದೆ.
ಏ. 19ರಂದು ಧ್ವಜಾರೋಹಣ, ರಾತ್ರಿ ಆರಾಧನಾ ಪೂಜೆ, ಪೂರ್ಣಿಮಾ ಉತ್ಸವ, ರಾತ್ರಿ ಹಾಲುಹಬ್ಬ, ಸವಾರಿ ಬಲಿ, ಬ್ರಹ್ಮಮಂಡಲ, ಭೂತ ಬಲಿ, ಏ. 20ರಂದು ರಾತ್ರಿ ಆರಾಧನಾ ಪೂಜೆ, ಬೈಗಿನ ಬಲಿ, ಸವಾರಿ ಬಲಿ, ಏ. 21ರಂದು ರಾತ್ರಿ ಆರಾಧನಾ ಪೂಜೆ, ನಿತ್ಯಬಲಿ, ಸವಾರಿ ಬಲಿ, ಮಹಾರಂಗಪೂಜೆ, ಭೂತಬಲಿ, ಏ. 22ರಂದು ಮಧ್ಯಾಹ್ನ ರಥಾರೋಹಣ, ಸಂಜೆ ಶ್ರೀಮನ್ಮಹಾರಥೋತ್ಸವ, ಭೂತಬಲಿ, ಕವಾಟಪೂರಣ, ಏ. 23ರಂದು ಕವಾಟೋದ್ಘಾಟನೆ, ತುಲಾಭಾರ ಸೇವೆ, ಮಹಾಪೂಜೆ, ರಾತ್ರಿ ಆರಾಧನಾ ಪೂಜೆ, ಓಕುಳಿ, ಅವಭೃಥ ಸ್ನಾನ, ಧ್ವಜಾವರೋಹಣ, ಎ. 24ರಂದು ಮಹಾಸಂಪ್ರೋಕ್ಷಣೆ, ಚಂಡಿಕಾಯಾಗ, ಮಾರಿಪೂಜಾ ಸಮಾರಾಧನೆ, ಮಹಾಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ಹಿರಿಯಡಕ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಎಚ್. ಹಾಲಪ್ಪ ಪ್ರಕಟನೆಯಲ್ಲಿ ತಿಳಿಸಿದ್ದಾರೆ.