ಹಿರಿಯಡಕ: ಮಾ.19ಕ್ಕೆ ಕಾಂಗ್ರೆಸ್ ನಿಂದ ‘ಸುವರ್ಣ ಸಂಭ್ರಮದಲ್ಲಿ ಭೂ ಸುಧಾರಣಾ ಕಾನೂನು’ ಸಮಾವೇಶ

ಉಡುಪಿ: ಕಾಂಗ್ರೆಸ್ ಸರ್ಕಾರವು ಭೂ ಸುಧಾರಣಾ ಕಾನೂನು ಜಾರಿಗೊಳಿಸಿ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ  ‘ಸುವರ್ಣ ಸಂಭ್ರಮದಲ್ಲಿ ಭೂ ಸುಧಾರಣಾ ಕಾನೂನು’ ಎಂಬ ಬೃಹತ್ ಸಮಾವೇಶವನ್ನು ಇದೇ ಮಾ.19ರಂದು ಬೆಳಿಗ್ಗೆ 10.30ಕ್ಕೆ ಹಿರಿಯಡಕ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದರು.

ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಭೂ ಸುಧಾರಣಾ ಮಸೂದೆ ಜಾರಿಯಾದಾಗ ಸರ್ಕಾರದಲ್ಲಿ ಸಚಿವರಾಗಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರನ್ನು ಸನ್ಮಾನಿಸಲಾಗುವುದು ಎಂದರು. 

ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್, ಮಾಜಿ ಸಚಿವರಾದ ಬಿ. ರಮಾನಾಥ ರೈ, ವಿನಯಕುಮಾರ್ ಸೊರಕೆ, ಅಭಯಚಂದ್ರ ಜೈನ್, ಪ್ರಮೋದ್ ಮಧ್ವರಾಜ್, ಯು.ಟಿ. ಖಾದರ್, ಮಾಜಿ ವಿಧಾನ ಪರಿಷತ್ ಸಭಾಧ್ಯಕ್ಷ ಕೆ. ಪ್ರತಾಪಚಂದ್ರ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ,  , ಮಾಜಿ ಶಾಸಕ ಗೋಪಾಲ ಪೂಜಾರಿ, ಯು.ಆರ್, ಸಭಾಪತಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಕ್ತಾರ ಬಿಪಿನ್ ಚಂದ್ರಪಾಲ್, ಮುಖಂಡರಾದ ಪ್ರಖ್ಯಾತ ಶೆಟ್ಟಿ, ಸಂತೋಷ್ ಕುಲಾಲ್, ಭಾಸ್ಕರ ರಾವ್ ಕಿದಿಯೂರು ಇದ್ದರು.