ಉಡುಪಿ: ಶ್ರೀಕೃಷ್ಣಮಠ ಪರ್ಯಾಯ ಮಠದ ಶ್ರೀ ವಿದ್ಯಾ ಸಾಗರ ತೀರ್ಥ ಸ್ವಾಮೀಜಿ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಗಳು ಅಯೋಧ್ಯೆಯಿಂದ ತರಲಾದ ಪವಿತ್ರ ಮಂತ್ರಾಕ್ಷತೆ ತುಂಬಿದ ಕಲಶವನ್ನು ಮೆರವಣಿಗೆ ಮೂಲಕ ಶ್ರೀ ಕೃಷ್ಣ ಮಠದ ಮುಂಭಾಗದಲ್ಲಿ ಸ್ವಾಗತಿಸಿ ಬರಮಾಡಿಕೊಂಡರು.
ಅಯೋಧ್ಯೆಯಿಂದ ಪವಿತ್ರ ಮಂತ್ರಾಕ್ಷತೆಯನ್ನು ಪ್ರತಿ ಗ್ರಾಮದ ಪ್ರತಿ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆರ್ ಎಸ್ ಎಸ್ ನ ಹಿರಿಯರಾದ ಶಂಬು ಶೆಟ್ಟಿ, ಪ್ರಾಂತ ಅರ್ಚಕ ಪುರೋಹಿತ ಪ್ರಮುಖ ಪ್ರೇಮಾನಂದ ಶೆಟ್ಟಿ, ಭಜರಂಗ ದಳ ರಾಜ್ಯ ಸಂಚಾಲಕ ಸುನಿಲ್ ಕೆ ಆರ್, ವಿಭಾಗ ಕಾರ್ಯಕಾರಿಣಿ ಸದಸ್ಯ ಕುಯಿಲಾಡಿ ಸುರೇಶ ನಾಯಕ್, ಭಜರಂಗ ದಳ ಜಿಲ್ಲಾ ಸಂಚಾಲಕ ಚೇತನ್ ಪೆರಾಲ್ಕೆ ಜಿಲ್ಲಾ ಸೇವಾ ಪ್ರಮುಖ ವಿಖ್ಯಾತ್ ಭಟ್, ಪ್ರಾಣ ಪ್ರತಿಷ್ಠಾ ಅಭಿಯಾನದ ಜಿಲ್ಲಾ ಸಂಯೋಜಕ ಸುರೇಂದ್ರ ಮಾರ್ಕೊಡ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಅಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ , ವಿಶ್ವ ಹಿಂದೂ ಪರಿಷತ್ ನಿಕಟಪೂರ್ವ ಜಿಲ್ಲಾ ಅಧ್ಯಕ್ಷ ಸುಪ್ರಸಾದ್ ಶೆಟ್ಟಿ, ಮಠದ ದಿವಾನ ವರದರಾಜ್ ಭಟ್, ಪರ್ಯಾಯ ಮಠ ಸ್ವಾಗತ ಸಮಿತಿ ಪ್ರ ಕಾರ್ಯದರ್ಶಿ ವಿಷ್ಣು ಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.












