ಗೃಹ ಸಚಿವ ಅರಗ ಜ್ಞಾನೇಂದ್ರ ಬೆಂಗಾವಲು ವಾಹನಕ್ಕೆ ಕಾರು ಢಿಕ್ಕಿ; ಭದ್ರಾವತಿ ಬಳಿ ಅಪಘಾತ

ಭದ್ರಾವತಿ: ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನಕ್ಕೆ ಎದುರುಗಡೆಯಿಂದ ಬರುತ್ತಿದ್ದಂತ ಮತ್ತೊಂದು ಕಾರು ಢಿಕ್ಕಿ ಹೊಡೆದಿರುವ ಘಟನೆ ಭದ್ರಾವತಿಯ ಜಂಕ್ಷನ್ ಬಳಿ ನಡೆದಿದೆ.

ಸಚಿವ ಅರಗ ಜ್ಞಾನೇಂದ್ರ ತುಮಕೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದು ಈ ವೇಳೆ ಎದುರುಗಡೆ ಬರುತ್ತಿದ್ದ ಕಾರೊಂದು ಬೆಂಗಾವಲು ವಾಹನಕ್ಕೆ ಢಿಕ್ಕಿಯಾಗಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.