ಫೆ.14 ರಂದು ಹುತಾತ್ಮ ವೀರ ಯೋಧರಿಗೆ ಗೌರವಾರ್ಪಣಾ ಕಾರ್ಯಕ್ರಮ

ಉಡುಪಿ: ಫೆ.14 ರಂದು ಶ್ರೀ ಸಾಯಿ ಈಶ್ವರ್ ಗುರೂಜಿ ನೇತೃತ್ವದಲ್ಲಿ ಹುತಾತ್ಮ ವೀರ ಯೋಧರಿಗೆ ಗೌರವಾರ್ಪಣಾ ಕಾರ್ಯಕ್ರಮವು ಐ ಸ್ಟ್ಯಾಂಡ್ ಫಾರ್ ದಿ ನೇಶನ್ ಸಂಸ್ಥೆಯ ಸಹಭಾಗಿತ್ವದಲ್ಲಿ ಅಜ್ಜರಕಾಡಿನ ಉಡುಪಿ ಜಿಲ್ಲಾ ಯೋಧರ ಸ್ಮಾರಕದಲ್ಲಿ ಮಧ್ಯಾಹ್ನ 3.15 ಕ್ಕೆ ನಡೆಯಲಿದೆ.

ಫೆ. 14, 2019 ರಂದು ಜಮ್ಮುವಿನ ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ, ದೇಶದ ಭದ್ರತಾ ಪಡೆಯ ಯೋಧರು ತೆರಳುತ್ತಿದ್ದ ವಾಹನಕ್ಕೆ ಆತ್ಮಹತ್ಯಾ ದಳದ ಉಗ್ರರು ಬಾಂಬು ವಿಸ್ಪೋಟಿಸಿ 40 ಮಂದಿ ಯೋಧರು ಹುತಾತ್ಮರಾದ ನೆನಪಿಗಾಗಿ ಪ್ರತಿವರ್ಷ ಈ ದಿನದಂದು ಇದ್ದಲ್ಲಿಯೇ ಎದ್ದು ನಿಂತು ಸೆಲ್ಯೂಟ್ ಹೊಡೆದು ಗೌರವಾರ್ಪಣೆಯನ್ನು ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.