ಹೂವಿನ ಬೆಳೆಗಾರರಿಗೆ ನಷ್ಠ ಪರಿಹಾರ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ ಮೇ 13:  ಕೋವಿಡ್-19 ರ ಕಾರಣ ದೇಶದಲ್ಲಿ ವಿಧಿಸಿರುವ ಲಾಕ್ ಡೌನ್ ನಿಂದ , ಹೂವಿನ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ರೂ. 25,000 ಪರಿಹಾರವನ್ನು ಗರಿಷ್ಟ 1.00 ಹೆಕ್ಟೇರ್ ವಿಸ್ತೀರ್ಣಕ್ಕೆ ಮುಖ್ಯಮಂತ್ರಿಯವರು ಘೋಷಿಸಿದ್ದು,  ಪ್ರಸ್ತುತ  ಘೋಷಿಸಿರುವ ಪರಿಹಾರವನ್ನು ರೈತರಿಗೆ ಪಾವತಿಸುವ ಬಗ್ಗೆ ಮಾರ್ಗಸೂಚಿ ಹೊರಡಿಸಲಾಗಿದೆ.

ಪರಿಹಾರವನ್ನು  2019-20  ನೇ ಸಾಲಿನಲ್ಲಿ  ಬೆಳೆ ಸಮೀಕ್ಷೆಯ  ಮಾಹಿತಿಯ ಆಧಾರದಲ್ಲಿ ಪಾವತಿಸಲಾಗುವುದು.   ರೈತರು ತಾವು  ಬೆಳೆದಿರುವ ಬಹು ವಾರ್ಷಿಕ ಪುಷ್ಪ ಬೆಳೆಯು 2019-20 ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ಬಗ್ಗೆ ಹಾಗೂ ವಾರ್ಷಿಕ ಪುಷ್ಪ ಬೆಳೆಗಳು 2019-20 ನೆ ಸಾಲಿನ ಹಿಂಗಾರು ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ಬಗ್ಗೆ ಸಂಬಂದಿಸಿದ ತಾಲೂಕು ತೋಟಗಾರಿಕೆ ಇಲಾಖೆಯ ಕಛೇರಿಗಳಲ್ಲಿ ಪರಿಶೀಲಿಸಿಕೊಳ್ಳುವುದು.

ರೈತರು ಈಗಾಗಲೇ ಇಲಾಖೆಯ FRUITS ತಂತ್ರಾಂಶದಲ್ಲಿ ನೋಂದಣಿಯಾಗಿದ್ದರೆ ಪರಿಹಾರವನ್ನು ನೇರವಾಗಿ ಪಾವತಿಸಲಾಗುವುದು, ಬೆಳೆ ಸಮೀಕ್ಷೆಯಲ್ಲಿ ಪುಷ್ಪ ಬೆಳೆ ದಾಖಲಾಗದ ರೈತರು ಅರ್ಜಿ, ಪಹಣಿ, ಆಧಾರ್ ನ ಪ್ರತಿ , ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಹಾಗೂ ಮೊಬೈಲ್ ಸಂಖ್ಯೆಯ ವಿವರಗಳನ್ನು ತಾಲೂಕು ತೋಟಗಾರಿಕೆ ಇಲಾಖೆಯ ಕಛೇರಿಗೆ ಸಲ್ಲಿಸುವುದು, ಅರ್ಜಿದಾರರ ಸ್ಥಳ ಪರಿಶೀಲನೆಯನ್ನು ಜಂಟಿ ಪರಿಶೀಲನಾ ತಂಡದಿಂದ ಕೈಗೊಂಡು ನಿಯಮಾನುಸಾರ ಪರಿಹಾರವನ್ನು ಪಾವತಿಸಲಾಗುವುದು,

ಹೆಚ್ಚಿನ ಮಾಹಿತಿಗಾಗಿ  ತೋಟಗಾರಿಕೆ ಉಪನಿರ್ದೇಶಕರು (ಜಿಪಂ), ಉಡುಪಿ ಜಿಲ್ಲೆ: 0820-2531950,  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.), ಉಡುಪಿ ತಾಲೂಕು: 0820-2522837 , ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.) ಕುಂದಾಪುರ ತಾಲೂಕು: 08254-230813, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಕಾರ್ಕಳ ತಾಲೂಕು 08258-230288 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.