ನಟಿ ಮೇಘನಾಗೆ ನೋವಾಗಿದ್ದರೆ ಮತ್ತೊಮ್ಮೆ ಕ್ಷಮೆ ಯಾಚಿಸುತ್ತೇನೆ: ಇಂದ್ರಜಿತ್ ಲಂಕೇಶ್

ಬೆಂಗಳೂರು: ಚಿರಂಜೀವಿ ಸಾವಿನ ಬಗ್ಗೆ ಹೇಳಿರುವ ಹೇಳಿಕೆಯನ್ನು ಈಗಾಗಲೇ ಹಿಂಪಡೆದಿದ್ದೇನೆ. ಮೇಘನಾ ರಾಜ್ ಹಾಗೂ ಅವರ ಕುಟುಂಬಕ್ಕೆ ನೋವಾಗಿದ್ದಾರೆ ಮತ್ತೊಮ್ಮೆ ಕ್ಷಮೆ ಯಾಚಿಸುತ್ತೇನೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇಂದು ನಟಿ ಮೇಘನಾ ಅವರು ಚಿರಂಜೀವಿ ಸರ್ಜಾ ಸಾವಿನ ಬಗ್ಗೆ ಇಂದ್ರಜಿತ್ ಲಂಕೇಶ್ ಹೇಳಿಕೆಯ ವಿರುದ್ಧ ಫಿಲ್ಮ್ ಚೇಂಬರ್ ಗೆ ಪತ್ರ ಬರೆದು ನೋವು ತೋಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಇಂದ್ರಜಿತ್, ಮತ್ತೆ ಕ್ಷಮೆಯಾಚಿಸಿದ್ದಾರೆ. ಅಲ್ಲದೆ, ಅವರ ಮನೆಗೆ ಹೋಗಿಯೇ ಕ್ಷಮೆಯಾಚಿಸುವುದಾಗಿ ಹೇಳಿದ್ದಾರೆ.