ನೀಲಾವರ ಗೋಶಾಲೆಯಲ್ಲಿ ಮೊದಲ ಬಾರಿಗೆ ಸ್ವಾತಂತ್ರ್ಯೋತ್ಸವ: ಗೋವಿನ ಪೋಷಣೆ ರಾಷ್ಟ್ರೀಯ ಆದ್ಯತೆಯಾಗಲಿ: ವಿಶ್ವಪ್ರಸನ್ನ ಶ್ರೀ

ನೀಲಾವರ: ಪ್ರತಿಯೊಂದು ಗೋವು ಹುಟ್ಟಿನಿಂದ ಕೊನೆಯವರೆಗೂ ಪರಹಿತಕ್ಕಾಗಿ ಲೋಕದ ಒಳಿತಿಗಾಗಿಯೇ ಜೀವಿಸುತ್ತದೆ. ಆದ್ದರಿಂದ ರಾಷ್ಟ್ರದ ಸುಭಿಕ್ಷೆ ಸಮೃದ್ಧಿಯನ್ನು ಬಯಸುವ ಸರಕಾರ ಹಾಗೂ ಪ್ರತಿಯೊಬ್ಬರೂ ಗೋವಿನ ಪೋಷಣೆಯನ್ನು ರಾಷ್ಟ್ರೀಯ ಕರ್ತವ್ಯ ಎಂದೇ ಪರಿಗಣಿಸಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕರೆ ನೀಡಿದ್ದಾರೆ .
ನೀಲಾವರ ಗೋಶಾಲೆಯಲ್ಲಿರುವ ಶಾಖಾಮಠದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀಗಳು ಇದೇ ಮೊದಲ ಬಾರಿಗೆ  ಗೋಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶನಿವಾರ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು .‌
ಎಷ್ಟೇ ಕಷ್ಟ ಸವಾಲುಗಳು ಎದುರಾದರೂ ದೇಶದಲ್ಲಿ ಗೋವಿನ ರಕ್ಷಣೆಯ ಕಾರ್ಯದಿಂದ ಯಾರೊಬ್ಬರೂ ಹಿಂದೆ ಸರಿಯಲೇ ಬಾರದು. ಒಂದು ವೇಳೆ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ  ದೇಶಕ್ಕೆ ವಿಪತ್ತು ನಿಶ್ಚಿತ ಎಂದು ತಿಳಿಸಿದರು.
ಗೋಶಾಲೆಯ ವ್ಯವಸ್ಥಾಪಕ‌ ನರಸಿಂಹ ಭಟ್,  ಶ್ರೀಗಳ ಆಪ್ತ ಕಾರ್ಯದರ್ಶಿಗಳಾದ ಕೃಷ್ಣ ಭಟ್ , ವಿಷ್ಣುಮೂರ್ತಿ ಆಚಾರ್ಯ , ಸಿಬ್ಬಂದಿ ವರ್ಗ  ಮತ್ತು  ಶಾಸ್ತ್ರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು