ಪಾಕ್ ಸೈನಿಕರ ಕುತಂತ್ರಕ್ಕೆ ಭಾರತೀಯ ಸೇನೆಯ ತಕ್ಕ ಪ್ರತ್ಯುತ್ತರ: ಎಂಟು ಪಾಕ್ ಸೈನಿಕರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ( ಎಲ್ ಒಸಿಯಲ್ಲಿ) ಕದನ ವಿರಾಮ ಉಲ್ಲಂಘಿಸಿ ಭಾರತೀಯ ಸೇನೆಯ ಮೇಲೆ ದಾಳಿ ನಡೆಸಿದ ಪಾಕಿಸ್ತಾನ ಸೇನೆಯ ಎಸ್ ಎಸ್ ಜಿ ಕಮಾಂಡೋ ಸಹಿತ 8 ಮಂದಿ ಸೈನಿಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಪಾಕ್ ಸೇನೆಯ ಅಪಾರ ಪ್ರಮಾಣದ ಬಂಕರ್ ಗಳು, ಇಂಧನ ಡಂಪಿಂಗ್ ಮತ್ತು ಕಾರ್ಯಸ್ಥಳಗಳನ್ನು ಭಾರತೀಯ ಸೇನೆ ನಾಶಪಡಿಸಿದ್ದು, ಘಟನೆಯಲ್ಲಿ 10-12 ಪಾಕ್ ಯೋಧರು ಗಾಯಗೊಂಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಇದಕ್ಕೂ ಮುನ್ನ ನೆರೆಯ ರಾಷ್ಟ್ರದಿಂದ ಕದನ ವಿರಾಮ ಉಲ್ಲಂಘನೆ ಹಾಗೂ ಪಾಕ್ ಮೂಲದ ಉಗ್ರರ ಒಳನಸುಳುವಿಕೆ ತಡೆಯುವ ಪ್ರಯತ್ನದಲ್ಲಿ  ಪ್ರತ್ಯೇಕ ಕಡೆಗಳಲ್ಲಿ ಭಾರತದ ಇಬ್ಬರು ಯೋಧರು ಹುತಾತ್ಮರಾದರು. ಉರಿ ವಲಯದಲ್ಲಿ ಇಬ್ಬರು ಹಾಗೂ ಗುರೆಜ್ ಸೆಕ್ಟರ್ ನಲ್ಲಿ ಒಬ್ಬರು ಹುತಾತ್ಮರಾಗಿರುವುದಾಗಿ ಸೇನಾ ಮೂಲಗಳು ಮಾಹಿತಿ ನೀಡಿವೆ.