ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ಉದ್ಘಾಟನಾ ಕಾರ್ಯಕ್ರಮ

ಉಡುಪಿ: ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ಉದ್ಘಾಟನಾ ಕಾರ್ಯಕ್ರಮವು ಸೆ.18 ಭಾನುವಾರದಂದು ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ  ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಂಕರಪುರ ಸಂತ ಜಾನ್ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮೋಹನ್ ದಾಸ್ ಆರ್ ಶೆಟ್ಟಿ ಭಾಗವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೂರ್ವ ಸ್ವಾಮ್ಯದ ವಾಹನ ವಿತರಕ ಸಂಘದ ಸಂಸ್ಥಾಪಕ ಉದಯ್ ಕಿರಣ್ ವಹಿಸಿದ್ದರು.

ಉಡುಪಿ ಆರಕ್ಷಕ ಠಾಣೆಯ ಉಪಅಧೀಕ್ಷಕ ವಾಸಪ್ಪ ನಾಯಕ್, ಉಡುಪಿ ಟ್ರಾಫಿಕ್ ಪೊಲೀಸ್ ಎಸ್ ಐ ಅಬ್ದುಲ್ ಖಾದರ್ , ದಕ್ಷಿಣ ಕನ್ನಡ ಪೂರ್ವ ಸ್ವಾಮ್ಯದ ವಾಹನ ವಿತರಕ ದಲ್ಲಾಳಿಗಳ ಸಂಘದ ಸಂಸ್ಥಾಪಕರಾದ ಅಶೋಕ್ ಕುಮಾರ್ ಶೆಟ್ಟಿ, ಸಂಘದ ಅಧ್ಯಕ್ಷ ಜಯರಾಮ್ ಕೋಟ್ಯಾನ್, ಗೌರವಾಧ್ಯಕ್ಷ ಸದಾಶಿವ ಶೆಟ್ಟಿ, ಉಡುಪಿ ಪೂರ್ವ ಸ್ವಾಮ್ಯದ ವಾಹನ ವಿತರಕ ಸಂಘದ ಸಂಸ್ಥಾಪಕ ಮತ್ತು ಉಡುಪಿ ಕಾರ್ಸ್ ಮಾಲಕ ಮೊಹಮ್ಮದ್ ಅಶ್ರಫ್, ದ.ಕ ಹಾಗೂ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ದಿನೇಶ್, ಪ್ರೊಬೆಷನರಿ
ಪಿ.ಎಸ್.ಐ ಪುನೀತ್ ಕುಮಾರ್ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.