ಕೊಡವೂರು: ಲಕ್ಷ್ಮೀ ನಗರ ರಿಕ್ಷಾ ನಿಲ್ದಾಣದಲ್ಲಿ ಸೋಲಾರ್ ದೀಪ ಅಳವಡಿಕೆ

ಕೊಡವೂರು: ವಾರ್ಡಿನ ಲಕ್ಷ್ಮೀ ನಗರ ರಿಕ್ಷಾ ನಿಲ್ದಾಣಕ್ಕೆ ಸೋಲಾರ್ ದೀಪ ಅಳವಡಿಕೆಯ ಉದ್ಘಾಟನಾ ಕಾರ್ಯಕ್ರಮವು ಡಿ. 15, ಗುರುವಾರದಂದು ಲಕ್ಷ್ಮೀನಗರ ರಿಕ್ಷಾ ನಿಲ್ದಾಣದಲ್ಲಿ ನಡೆಯಿತು.

ಕೆಲವು ತಿಂಗಳ ಹಿಂದೆ ಜನರ ಕುಂದು ಕೊರತೆಗಳನ್ನು ವಿಚಾರಿಸುವ ಸಂದರ್ಭದಲ್ಲಿ ಕೊಡವೂರಿನ ಲಕ್ಷ್ಮೀನಗರ ಆಟೋ ನಿಲ್ದಾಣದಲ್ಲಿ ಗ್ರಾಮ ಸಭೆಯನ್ನು ನಡೆಸಿದಾಗ ಸೋಲಾರ್ ದೀಪದ ಅವಶ್ಯಕತೆಯನ್ನು ಅಲ್ಲಿನ ರಿಕ್ಷಾ ಚಾಲಕರು ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿಯ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ನಿಲ್ದಾಣಕ್ಕೆ ದಾನಿಗಳ ನೆರವಿನಿಂದ ಸೋಲಾರ್ ದೀಪವನ್ನು ಅಳವಡಿಸಲಾಯಿತು. ದಾನಿಗಳಾದ ಕರಾವಳಿ ಕೋ ಆಪ್ ಕ್ರೆಡಿಟ್ ಸೊಸೈಟಿ ಸಂತೆಕಟ್ಟೆ ಇವರ ನೆರವಿನಿಂದ ಸೋಲಾರ್ ದೀಪ ಅಳವಡಿಸಿ ಕೊಡಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕರಾವಳಿ. ಕೋ. ಆ. ಸೊಸೈಟಿಯ ಅಧ್ಯಕ್ಷ ಉಮೇಶ್ ಶೆಟ್ಟಿ ಇವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು.

ಈ ಸಂದರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷ ಉದಯ ಶೆಟ್ಟಿ, ನಿರ್ದೇಶಕ ಉದಯಕುಮಾರ್ ಶೆಟ್ಟಿ, ಲಕ್ಷ್ಮೀನಗರ ಆಟೋ ರಿಕ್ಷಾ ನಿಲ್ದಾಣದ ಅಧ್ಯಕ್ಷ ನಾಗರಾಜ್ ಹಾಗೂ ವಾರ್ಡ್ ಅಭಿವೃದ್ಧಿ ಸಮಿತಿಯ ಅಶೋಕ್ ಶೆಟ್ಟಿಗಾರ್ ಉಪಸ್ಥಿತರಿದ್ದರು. ನಗರಸಭಾ ಸದಸ್ಯ ವಿಜಯಕೊಡವೂರು ಇವರು ಸಂಯೋಜಕರಾಗಿ ನೇತೃತ್ವ ವಹಿಸಿದರು.