ಭ್ರಷ್ಟಚಾರ ಆರೋಪಿಸಿ ಉಪಲೋಕಾಯುಕ್ತರಿಗೆ ದೂರು: ಉಡುಪಿ ನೋಂದಣಿ ಕಛೇರಿಯಲ್ಲಿ ಲೋಕಾಯುಕ್ತ ಪೋಲಿಸರಿಂದ ತನಿಖೆ

ಉಡುಪಿ: ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರು ಉಡುಪಿ ಜಿಲ್ಲೆಗೆ ಭೇಟಿ ನೀಡಿ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ವಿವಿಧ ಕಚೇರಿಗಳಿಗೆ ಅನೀರಿಕ್ಷಿತ ಭೇಟಿ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಕಾರ್ಯಕ್ರಮವೊಂದರಲ್ಲಿ ವಕೀಲರರೊಬ್ಬರು ಸಾರ್ವಜನಿಕರು ಉಡುಪಿ ನೋಂದಣಿ ಕಚೇರಿಯಲ್ಲಿ ಭ್ರಷ್ಟಚಾರ ನಡೆಯುತ್ತಿದೆ ಎಂದು ಮೌಖಿಕವಾಗಿ ದೂರಿದ ಹಿನ್ನಲೆ ಉಪ ಲೋಕಾಯುಕ್ತ, ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಇವರು ಉಡುಪಿ ನೋಂದಣಿ ಕಚೇರಿಯ ತನಿಖೆಗೆ ಸರ್ಚ್ ವಾರೆಂಟ್ ಅನ್ನು ಹೊರಡಿಸಿ ತನಿಖೆಗೆ ಮಂಗಳೂರು ವಿಭಾಗ ಲೋಕಾಯುಕ್ತ ಎಸ್.ಪಿ ಗೆ ಆದೇಶಿಸಿದ್ದರು.

ಮಂಗಳೂರಿನ ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಸರ್ಚ್ ವಾರೆಂಟ್ ಆದೇಶದಂತೆ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲಿಸಿದರು ಈ ಸಂದರ್ಭದಲ್ಲಿ ಯಾವುದೇ ಅವ್ಯವಹಾರಗಳು ಆಗದೇ ಇರುವುದು ಕಂಡುಬಂದಿತ್ತು ಈ ಪರಿಶೀಲನೆ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ವಕೀಲರು ಹಾಜರಿದ್ದರು.