ಸಾವಯವ ಸಿರಿ ಅನುಷ್ಠಾನಕ್ಕೆ ಅರ್ಜಿ ಆಹ್ವಾನ      

ಉಡುಪಿ: ಕೃಷಿ ಇಲಾಖೆಯ ವತಿಯಿಂದ, ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರವು ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ದೊರಕಿಸಲು ಹಾಗೂ ಸಾವಯವ ಕೃಷಿಯನ್ನು ಉತ್ತೇಜಿಸಲು ಸಾವಯವ ಸಿರಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲಾ ಮಟ್ಟದಲ್ಲಿ ಸಾವಯವ ಸಿರಿ ಯೋಜನೆಯನ್ನು ಅನುಷ್ಠಾನ ಮಾಡಲು ಅರ್ಹ ನೊಂದಾಯಿತ ಸಾಮಾಜಿಕ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹತ್ತು ವರ್ಷಗಳಿಂದ ಸಾವಯವ ಕೃಷಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ, ಸಾವಯವ ಕೃಷಿ ಸಂಬಂಧಿತ ತರಬೇತಿ/ಕಾರ್ಯಾಗಾರಗಳನ್ನು ಆಯೋಜಿಸಲು ಅವಶ್ಯಕವಾದ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ, ಕನಿಷ್ಟ 10 ಹೆ. ವ್ಯವಸಾಯ ಯೋಗ್ಯ ಪ್ರದೇಶವನ್ನು ಹೊಂದಿರುವ ಹಾಗೂ ಆ ವ್ಯಾಪ್ತಿಯ ಕೃಷಿ ವಿಶ್ವವಿದ್ಯಾಲಯದೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ನೋಂದಾಯಿತ ಸಾಮಾಜಿಕ ಸಂಸ್ಥೆಗಳು ಫೆಬ್ರವರಿ 24ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಜಿಲ್ಲಾ ಆಡಳಿತ ಕಛೇರಿ ಸಂಕೀರ್ಣ, ಎರಡನೆ ಮಹಡಿ, ಸಿ ಬ್ಲಾಕ್, ರಜತಾದ್ರಿ, ಮಣಿಪಾಲ ಅನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.