ತಪ್ಪಿದ ವಿಧಾನಪರಿಷತ್ ಟಿಕೆಟ್, ಮತ್ತೆ ವಕೀಲ ವೃತ್ತಿ ಆರಂಭಿಸಿದ ಐವನ್ ಡಿಸೋಜ

ಮಂಗಳೂರು: ವಿಧಾನಪರಿಷತ್ ಸದಸ್ಯರಾಗಿ ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದ ಐವನ್ ಡಿ’ ಸೋಜ ಅವರ ಸದಸ್ಯತ್ವದ ಅವಧಿ ಮುಕ್ತಾಯಗೊಂಡಿದ್ದು, ಎರಡನೇ ಅವಧಿಗೆ ವಿಧಾನಪರಿಷತ್ ಸದಸ್ಯತ್ವಕ್ಕೆ ಅವಕಾಶ ಸಿಗದ ಕಾರಣ ಹಿಂದೆ ಮಾಡುತ್ತಿದ್ದ ವಕೀಲ ವೃತ್ತಿಯನ್ನು ಮತ್ತೆ ಆರಂಭಿಸಿದ್ದಾರೆ.
ಬಹಳ ಚುರುಕಿನ ವಿಧಾನಪರಿಷತ್ ಸದಸ್ಯರಾಗಿ ಗುರುತಿಸಿಕೊಂಡಿದ್ದ ಐವನ್ ಡಿ’ ಸೋಜ, ವಿಧಾನ ಪರಿಷತ್ ಸದಸ್ಯರಾಗಿ ಎರಡನೇ ವರ್ಷಕ್ಕೆ ಸಿದ್ದರಾಮಯ್ಯ ಸರಕಾರದಲ್ಲಿ ಸರಕಾರಿ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸಿದ್ದರು.
ಅನಂತರ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ ಜೆಡಿಎಸ್ ಸಮಿಶ್ರ ಸರಕಾರದಲ್ಲಿ ಕಂದಾಯ ಇಲಾಖೆಯ ಸಂಸದೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದರು.
ಅಲ್ಲದೇ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹೆಚ್ಚಿನ ೬ ವರ್ಷದ ಅವಧಿಯಲ್ಲಿ 1600 ಜನರಿಗೆ 6.63 ಕೋಟಿ ಪರಿಹಾರ ನಿಧಿ ಕೊಡಿಸಿದ ಕೀರ್ತಿ ಐವನ್ ಅವರದ್ದು. ಸದ್ಯ ಮಂಗಳೂರಿನಲ್ಲಿ ವಕೀಲ ವೃತ್ತಿ ಮತ್ತೆ ಆರಂಭಿಸಿದ್ದು, ಇದರ ಜೊತೆಗೆ ಪಕ್ಷದ ಬಲವರ್ಧನೆ ತೊಡಗಿಸಿಕೊಳ್ಳಲಿದ್ದೇನೆ ಎನ್ನುತ್ತಾರೆ ಐವನ್ ಡಿ ಸೋಜಾ.