ಪಡುಬಿದ್ರಿ: ನಾಳೆ (ಜು.9) ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸಂಘದ ನವೀಕೃತ ಹವಾನಿಯಂತ್ರಿತ ಸಿಟಿ ಶಾಖೆ ಉದ್ಘಾಟನೆ

ಪಡುಬಿದ್ರಿ: ಪಡುಬಿದ್ರಿ ವ್ಯಾವಸಾಯಿಕ ಸಹಕಾರಿ ಸಂಘದ ಪಡುಬಿದ್ರಿ ಹೃದಯಭಾಗದ ನವೀಕೃತ, ಸಂಪೂರ್ಣ ಹವಾ ನಿಯಂತ್ರಿತ ಸಿಟಿ ಶಾಖೆಯ ಉದ್ಘಾಟನೆಯು ನಾಳೆ ಜು.09ರಂದು ಪೂರ್ವಾಹ್ನ 11.00 ಗಂಟೆಗೆ ದ.ಕ., ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ನೆರವೇರಿಸಲಿರುವರು. ಇವರೊಂದಿಗೆ ಕೃಷಿ ಸಲಕರಣೆ ಮಾರಾಟ ವಿಭಾಗದ ಉದ್ಘಾಟನೆಯನ್ನು ಅಂದು ನೇರವೇರಿಸಲಾಗುವುದೆಂದು ಸಂಘದ ಅಧ್ಯಕ್ಷ ವೈ. ಸುಧೀರ್ ಕುಮಾರ್ ಪ್ರಧಾನ ಕಛೇರಿಯಲ್ಲಿ  ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅದೇ ದಿನ ಸೊಸೈಟಿಯ ಪ್ರಧಾನ ಕಛೇರಿಯ ವೈ. ಲಕ್ಷ್ಮಣ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮವನ್ನು ಬೆಳಿಗ್ಗೆ 11.15ಕ್ಕೆ ಆಯೋಜಿಸಲಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ವಿವರಿಸಿದರು.
ಸಭಾ ಕಾರ್ಯಕ್ರಮದಲ್ಲಿ ಸೊಸೈಟಿಯ ಕಾರ್ಯವ್ಯಾಪ್ತಿಯಲ್ಲಿ ಭತ್ತದ ಕೃಷಿ ಬೆಳೆಯುವ 100ಕ್ಕೂಅಧಿಕ ಕೃಷಿಕರಿಗೆ ‘ಸಂಗಮ ಕೃಷಿ ನಿಧಿ’ಯಿಂದ ಸಹಾಯಧನವನ್ನು ವಿತರಿಸಲಾಗುವುದು.
ಕೃಷಿ ಸಾಮಾಗ್ರಿಗಳ ಮಳಿಗೆ ಉದ್ಘಾಟನೆಯನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ, ಶುದ್ಧ ಕುಡಿಯುವ ನೀರಿನ ಸೌಲಭ್ಯದ ಲೋಕಾರ್ಪಣೆಯನ್ನು ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ ಚಿನ್ನಾಭರಣದ ಶುದ್ಧತೆ ಪರಿಕ್ಷೀಸುವ ಯಂತ್ರ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಇವರು ನೇರವೇರಿಸಲಿರುವರು. ಪ್ರಧಾನ ಕಛೇರಿಯ ಸಭಾಂಗಣದಲ್ಲಿ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಉದ್ಘಾಟನೆಯನ್ನು ಶಾಸಕ ಲಾಲಾಜಿ ಆರ್.ಮೆಂಡನ್ ನೇರವೇರಿಸುವರು.
ಭತ್ತದ ಕೃಷಿಗೆ ಸಹಾಯಧನ ವಿತರಣೆಯನ್ನು ಉಡುಪಿ ಶಾಸಕ ಕೆ. ರಘುಪತಿ ಭಟ್ ನಡೆಸಲಿರುವರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರ ಸಂಘಗಳ ನಿಬಂಧಕ ಲಕ್ಷ್ಮೀ ನಾರಾಯಣ್ ಜಿ. ಎನ್., ಸಹಾಯಕ ನಿಬಂಧಕಿ ಲಾವಣ್ಯ ಕೆ. ಆರ್. ಉಪಸ್ಥಿತರಿರುವುದಾಗಿ ತಿಳಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರೊಂದಿಗೆ ಸಂಘದ ಉಪಾಧ್ಯಕ್ಷ ಗುರುರಾಜ್ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ. ಎಚ್., ನಿರ್ದೇಶಕರಾದ ಗಿರೀಶ್ ಪಲಿಮಾರು, ಶಿವರಾಮ ಎನ್. ಶೆಟ್ಟಿ, ವಾಸುದೇವ ದೇವಾಡಿಗ, ಮಾಧವ ಆಚಾರ್ಯ, ಸ್ಟ್ಯಾನಿ ಕ್ವಾಡ್ರಸ್ ಉಪಸ್ಥಿತರಿದ್ದರು.