ಕಲ್ಮಾಡಿ ವೆಲಂಕಣಿ ಮಾತೆಯ ವಾರ್ಷಿಕ ಮಹೋತ್ಸವ ಮೆರವಣಿಗೆ ಸಂಪನ್ನ

ಉಡುಪಿ: ಸ್ಟೆಲ್ಲಾ ಮಾರಿಸ್ ಚರ್ಚ್ ಕಲ್ಮಾಡಿ ಇಲ್ಲಿನ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವದ ಪ್ರಯುಕ್ತ ವೆಲಂಕಣಿ
ಮಾತೆಯ ಮೂರ್ತಿಯ ಮೆರವಣಗೆಯು ಆದಿವುಡುಪಿಯಿಂದ ಕಲ್ಮಾಡಿ ಚರ್ಚಿನವರೆಗೆ ನಡೆಯಿತು.

ಪುಣ್ಯಕ್ಷೇತ್ರದ ರೆಕ್ಟರ್ ವಂದನೀಯ ಬ್ಯಾಪ್ಟಿಸ್ಟ್ ಮಿನೇಜಸ್ ಅವರು ಧರ್ಮಾಧ್ಯಕ್ಷರಿಗೆ ಹಾಗೂ ನೆರೆದ ಭಕ್ತಾದಿಗಳಿಗೆ ಸ್ವಾಗತ ಕೋರಿದರು.

ಮಿಲಾಗ್ರಿಸ್ ಚರ್ಚಿ ಕಲ್ಯಾಣ್ಪುರದ ಸಹ ಗುರುಗಳಾದ ವಂದನೀಯ ಜೋಯ್ ಅಂದ್ರಾದೆ ಅವರು ದೇವರ ವಾಚನವನ್ನು ಓದಿ ಸಂದೇಶ ನೀಡಿದರು.

ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷ ಅತೀ ವಂದನೀಯ ಡಾ| ಅಲೋಷಿಯಸ್ ಪಾವ್ಲ್ ಡಿ’ಸೋಜಾ, ವೆಲಂಕಣಿ ಮಾತೆಯ ಮೂರ್ತಿಯನ್ನು ಆಶೀರ್ವದಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಶ್ರೀಮತಿ ಶೋಭ ಮೆಂಡೋನ್ನ ಕಾರ್ಯಕ್ರಮ ಸಂಯೋಜಿಸಿದರು.

ತದ ನಂತರ ನಡೆದ ಬಲಿಪೂಜೆಯನ್ನು ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷ ಅತೀ ವಂದನೀಯ ಡಾ| ಅಲೋಷಿಯಸ್ ಪಾವ್ಲ್ ಡಿ’ಸೋಜಾ ನಡೆಸಿಕೊಟ್ಟರು. ಅವರು ತಮ್ಮ ಸಂದೇಶದಲ್ಲಿ ದೇವರು ನಮ್ಮೊಂದಿಗೆ ಸಂವಾದಿಸಲು ಆಶಿಸುತ್ತಾರೆ ಆದರೆ ನಾವು ಪೂರಕವಾದ ವಾತಾವರಣವನ್ನು ಕಲ್ಪಿಸುತ್ತಿಲ್ಲ. ಜಗತ್ತಿನ ಗದ್ದಲದಲ್ಲಿ ದೇವರ ಮಾತು ಕೇಳಿಸುತ್ತಿಲ್ಲ. ಮಾತೆ ಮರಿಯಮ್ಮನವರು ಸದಾ ದೇವರ ಇಚ್ಚೆಯಂತೆ ನಡೆದವರು. ಪ್ರೀತಿಯ ತಾಯಿಯಾಗಿ, ವಿಶ್ವಾಸಿ ಮಡದಿಯಾಗಿ ಮತ್ತು ದುಖ:ತೃಪ್ತ ಕನ್ಯೆಯಾಗಿ ದೇವರ ಇಚ್ಚೆಯಂತೆ ಜೀವನ ನಡೆಸಿದರು ಎಂದರು.

ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು ಅಗೋಸ್ಟ್ 15 ರಂದು ನಡೆಯಲಿರುವುದು. ಆ ದಿನ ಬೆಳಗ್ಗೆ 10 ಗಂಟೆಗೆ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೊಬೋ ಬಲಿಪೂಜೆಯನ್ನು ನೆರೆವೇರಿಸಲಿರುವರು. ಅಂದು ಮಧ್ಯಾಹ್ನ 2 ಗಂಟೆಗೆ ಸಾಯಂಕಲ 4 ಗಂಟೆಗೆ ಹಾಗೂ 6 ಗಂಟೆಗೆ ಇತರ ಬಲಿಪೂಜೆಗಳು ನಡೆಯಲಿರುವುದು.