ಉಡುಪಿ: ಕನ್ನರ್ಪಾಡಿ ಸಾವಿತ್ರಿ ನಾಟ್ಯಶಾಲಾ ದಶಮಾನೋತ್ಸವ ಸಮಾರೋಪ ಕಾರ್ಯಕ್ರಮ ನ.15 ಮತ್ತು 16ರಂದು ಐವೈಸಿ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆ ನಿರ್ದೇಶಕಿ ಶ್ರೀವಿದ್ಯಾ ಸಂದೇಶ್ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ. 15ರಂದು ಬೆಳಿಗ್ಗೆ 10 ಗಂಟೆಗೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿದುಷಿ ಲಕ್ಷಿ ಗುರುರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಎಂ.ಎಲ್. ಸಾಮಗ, ಹಿರಿಯ ವಿದುಷಿ ಪ್ರತಿಭಾ ಸಾಮಗ, ರಾಧಾಕೃಷ್ಣ ನೃತ್ಯ ನಿಕೇತನ ನಿರ್ದೇಶಕಿ ವೀಣಾ ಸಾಮಗ ಉಪಸ್ಥಿತರಿವರು. 16ರಂದು ಸಾಯಂಕಾಲ 4 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಹಿರಿಯ ನೃತ್ಯಗುರು ಉಳ್ಳಾಲ್ ಮೋಹನ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ರುಪತಿ ಭಟ್, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಂಸತಿ ಇಲಾಖೆಯ ಪೂರ್ಣಿಮಾ, ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಮಾಜಿ ಉಪಕುಲಪತಿ ಡಾ. ಪ್ರಭಾಕರ್ ಭಾಗವಹಿಸಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಸಂಸ್ಥೆ ಕಾರ್ಯದರ್ಶಿ ಸಂದೇಶ್ ಕುಮಾರ್, ತೃಪ್ತಿ ಶೆಟ್ಟಿ, ಕಾರ್ತಿಕ್ ಪ್ರಭು ಉಪಸ್ಥಿತರಿದ್ದರು.

















