ಕಾಪು ಮಂಡಲ ಬಿಜೆಪಿ ಯುವ ಮೋರ್ಚಾದಿಂದ ಹುತಾತ್ಮ ಯೋಧರಿಗೆ ನುಡಿನಮನ

ಕಾಪು: ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಛತ್ತಿಸ್ ಗಡದಲ್ಲಿ ನಕ್ಸಲರ ದಾಳಿಯಿಂದ ಬಲಿಯಾದ ಹುತಾತ್ಮರಾದ ಯೋಧರಿಗೆ ನುಡಿನಮನ ಮತ್ತು ಮೌನ ಮೆರವಣಿಗೆ ಇಂದು ಕಾಪು ಪೇಟೆಯಲ್ಲಿ ನಡೆಯಿತು.

ನೂರಾರು ಬಿಜೆಪಿ ಕಾರ್ಯಕರ್ತರು ಮೊಂಬತ್ತಿ ಹಚ್ಚಿ ಮೌನ ಮೆರವಣಿಗೆ ನಡೆಸಿ ಹುತಾತ್ಮ ವೀರ ಯೋಧರಿಗೆ ಶ್ರದ್ಧಾಂಜಲಿ ಸಮರ್ಪಿಸಿದರು.

ಈ ಕಾರ್ಯಕ್ರಮದಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್, ಕ್ಷೇತ್ರ ಅಧ್ಯಕ್ಷ ಶ್ರೀಕಾಂತ್ ನಾಯಕ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಕಾಪು ಕ್ಷೇತ್ರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಕ್ಷೇತ್ರ ಮಹಿಳಾ ಮೋರ್ಚಾ ಅಧ್ಯಕ್ಷ ಸುಮ ಶೆಟ್ಟಿ, ಕಾಪು ತಾಲೂಕ್ ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್, ಕಾಪು ಯೋಜನ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ.

ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳಾದ ಪ್ರವೀಣ್ ಕುಮಾರ್, ಸಚಿನ್ ಬೊಳ್ಜೆ, ವಿಜೇತ್ ಬೆಳ್ಳರ್ಪಾಡಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಹಾಗೂ ಪಕ್ಷದ ಪ್ರಮುಖರಾದ ಗಂಗಾಧರ್ ಸುವರ್ಣ, ಪವಿತ್ರ ಶೆಟ್ಟಿ, ಕೇಸರಿ ಯುವರಾಜ್, ಸುರೇಖಾ, ರಾಜೇಶ್ ಕುಂದರ್, ರವಿ ಕೋಟ್ಯಾನ್, ಮಂಡಲ ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ಪಕ್ಷದ ಹಿರಿಯ, ಕಿರಿಯ ಕಾರ್ಯಕರ್ತರು ಉಪಸ್ಥಿತರಿದ್ದರು.