ಉಡುಪಿ: ಕಾರ್ಕಳ ತಾಲೂಕಿನ ಧೂಪದಕಟ್ಟೆಯಲ್ಲಿ ಭಯಾನಕ ಅಪಘಾತ ಸಂಭವಿಸಿದ್ದು, ಅಪಘಾತದ ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವೇಗವಾಗಿ ಬಂದ ಖಾಸಗಿ ಬಸ್ಸೊಂದು ಬಿಎಂಡಬ್ಲ್ಯೂ ಕಾರಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ .ಅದೃಷ್ಟವಶಾತ್ ಅಪಘಾತದಲ್ಲಿ ಕಾರಿನಲ್ಲಿದ್ದವರು ಪಾರಾಗಿದ್ದಾರೆ ಎನ್ನಲಾಗಿದೆ. ಪಕ್ಕದ ಕಾರಿನಲ್ಲಿದ್ದ ಕ್ಯಾಮೆರಾದಲ್ಲಿ ಈ ದೃಶ್ಯ ಸರೆಯಾಗಿದ್ದು ವೈರಲ್ ಆಗುತ್ತಿದೆ.












