ಕಾರ್ಕಳ ಪತ್ರಕರ್ತರ ಸಂಘದಿಂದ ಎಎಸ್ ಪಿಗೆ ದೂರು.

ಕಾರ್ಕಳ: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್‌ನಲ್ಲಿ ಮಾಧ್ಯಮ ವಿರೋಧಿ ಸಂದೇಶ ಹಂಚಿಕೊಂಡಿರುವುದನ್ನು ಖಂಡಿಸಿರುವ ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ಘಟಕವು ಕಾರ್ಕಳ ಪೊಲೀಸ್ ವಿಭಾಗದ ಎಎಸ್ಪಿಗೆ ಶುಕ್ರವಾರ ದೂರು ಸಲ್ಲಿಸಿದೆ.

ಪಕ್ಷವೊಂದರ ಕಾರ್ಯಕರ್ತರೆನ್ನಲಾದ ಪ್ರಖ್ಯಾತ್ ಹಾಗೂ ಹರಿಪ್ರಸಾದ್ ಶೆಟ್ಟಿ ಎಂಬವರು ಸಾಮಾಜಿಕ ಜಾಲತಾಣವಾದ ಫೇಸ್ ಬುಕ್‌ನಲ್ಲಿ ಪತ್ರಿಕೋದ್ಯಮ, ಮಾಧ್ಯಮಕ್ಕೆ ನಿಂದನಾತ್ಮಕ ಬರಹಗಳನ್ನು ಪ್ರಕಟಿಸಿದ್ದಾರೆ. ಕಾನೂನು ಕ್ರಮ ಕೈಗೊಳ್ಳುವಂತೆ ಎಎಸ್ಪಿ ಹರ್ಷ ಪ್ರೀಯವದಂ ಅವರಿಗೆ ಮನವಿ ಸಲ್ಲಿಸಿ, ಕಾನೂನು ಕ್ರಮ ಜರುಗಿಸುವಂತೆ ಮನವಿ ಸಲ್ಲಿಸಿದರು. ದೂರು ಸ್ವೀಕರಿಸಿದ ಎಎಸ್ಪಿಯವರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್, ಉಪಾಧ್ಯಕ್ಷ ಹರೀಶ್ ಸಚ್ಚರಿಪೇಟೆ, ಕಾರ್ಯದರ್ಶಿ ಹರೀಶ್ ಆಚಾರ್ಯ, ಜಿಲ್ಲಾ ಪ್ರತಿನಿಧಿ ಉದಯ್ ಮುಂಡ್ಕೂರು, ಸದಸ್ಯರುಗಳಾದ ಸಂಪತ್ ನಾಯಕ್, ಸತೀಶ್ ಶೆಟ್ಟಿ, ರಾಂ ಅಜೆಕಾರು, ಕೃಷ್ಣ ಅಜೆಕಾರು, ಅವಿನ್ ಶೆಟ್ಟಿ, ವಾಸುದೇವ್ ಭಟ್, ನಿರಂಜನ್ ಜೈನ್ ಉಪಸ್ಥಿತರಿದ್ದರು.