ಕಾರ್ಕಳ: ಅರಣ್ಯ ಇಲಾಖೆ ಕುದುರೆಮುಖ ವನ್ಯಜೀವಿ ವಿಭಾಗ, ಕಾರ್ಕಳ ಕೇಂದ್ರ ಕಚೇರಿಯ ಅಧೀಕ್ಷಕರಾಗಿದ್ದ ಹರಿಪ್ರಸಾದ್ (58) ಅವರು ಸೆ. 19ರಂದು ಬೆಳಿಗ್ಗೆ ನಿಧನ ಹೊಂದಿದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಯಲ್ಲಿದ್ದರು.
ಅರಣ್ಯ ಇಲಾಖೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಹರಿಪ್ರಸಾದ್ ವಿವಿಧ ಹುದ್ದೆಗಳನ್ನು ನಿಭಾಯಿಸಿ, ಅಧೀಕ್ಷಕರ ಹುದ್ದೆಗೆ ಪದೋನ್ನತಿ ಹೊಂದಿದ್ದರು. ಕರ್ತವ್ಯನಿಷ್ಠೆಯುಳ್ಳ ಅಧಿಕಾರಿಯಾಗಿದ್ದ ಅವರು ಸಹೋದ್ಯೋಗಿಗಳ ಮೆಚ್ಚುಗೆ ಪಡೆದಿದ್ದರು.
ಮೃತರು ಬೆಳ್ತಂಗಡಿ ತಾಲೂಕಿನ ವೇಣೂರು ಮೂಲದವರಾಗಿದ್ದು, ಪ್ರಸ್ತುತ ಕಾರ್ಕಳ ಕಂಬಳಬೆಟ್ಟುವಿನಲ್ಲಿ ವಾಸವಿದ್ದರು. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.


















