ಶ್ರೀಕೃಷ್ಣ ಮಠ: ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ,ಮಧುರ ಧ್ವನಿ ಚಾರಿಟೇಬಲ್ ಟ್ರಸ್ಟ್ ನ ಶ್ರೀಮತಿ ಪೂಜಾ ಮಹೇಶ್ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ನಡೆಯಿತು. ವಯೊಲಿನ್ ನಲ್ಲಿ ಶರ್ಮಿಳಾ ರಾವ್ ಮತ್ತು ತಬಲಾದಲ್ಲಿ ಬಾಲಚಂದ್ರ ಭಾಗವತರು ಸಹಕರಿಸಿದರು.