ಲಾಕ್ ಡೌನ್ ಮುಂದುವರಿಕೆ ಅನಿವಾರ್ಯವಾಗಲಿದೆ:ಮುರುಗೇಶ್ ನಿರಾಣಿ

ಕಲಬುರಗಿ:ಲಾಕ್ ಡೌನ್ ಮುಂದುವರಿಕೆ ಅನಿವಾರ್ಯವಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ

ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಈಗಾಗಲೇ ಮೇ 24ರವರೆಗೆ ಲಾಕ್ ಡೌನ್ ಜಾರಿಯಲ್ಲಿದ್ದು ಈ ನಡುವೆ ಕೋವಿಡ್ ತಡೆಗಾಗಿ ಲಾಕ್ ಡೌನ್ ವಿಸ್ತರಣೆ ಮಾಡಿದರೇ ಒಳ್ಳೆಯದು ಎಂದವರು ಹೇಳಿದ್ದಾರೆ.

ಕಲ್ಬುರ್ಗಿಯಲ್ಲಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ಕೊರೋನಾ ತಡೆಗೆ 10 ದಿನಗಳ ಕಾಲ ಲಾಕ್ ಡೌನ್ ಮಾಡಿದರೇ ಉತ್ತಮ. ಈ ಬಗ್ಗೆ ಸಿಎಂಗೆ ತಿಳಿಸಿದ್ದೇವೆ. ಆದರೆ ಸರ್ಕಾರ ಕೈಗೊಳ್ಳುವ ನಿರ್ಧಾರ ಅಂತಿಮವಾಗಲಿದೆ ಎಂದು ಹೇಳಿದರು.

ಕಳೆದ 3 ದಿನಗಳಿಂದ ಕೊರೋನಾ ಸ್ವಲ್ಪ ಕಡಿಮೆಯಾಗಿದೆ. ಆದರೇ ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ. ತಜ್ಞರು ಕೊಟ್ಟ ಸಲಹೆಯನ್ನು ಜಾರಿ ಮಾಡುತ್ತೇವೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.