ಆದಾಯಕ್ಕಿಂತ ಹೆಚ್ಚು ಆಸ್ತಿ, ರಾಜ್ಯದ ವಿವಿದೆಡೆ ಲೋಕಾಯುಕ್ತ ಪೊಲೀಸರ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ,  ಹಾಗೂ ಭ್ರಷ್ಟಾಚಾರ ಆರೋಪ ಸಂಬಂಧ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಗುರುವಾರ) ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಆರೋಪಿ ಅಧಿಕಾರಿಗಳಿಗೆ ಸಂಬಂಧಿಸಿದ 40 ಸ್ಥಳಗಳಲ್ಲಿ ಸಂಘಟಿತ ದಾಳಿ ನಡೆಸಲಾಗಿದೆ.

ತುಮಕೂರಿನ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜಶೇಖರ್, ದಕ್ಷಿಣ ಕನ್ನಡ ಜಿಲ್ಲೆಯ ಸರ್ವೆ ಮೇಲ್ವಿಚಾರಕ ಮಂಜುನಾಥ್, ವಿಜಯಪುರದ ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ರೇಣುಕಾ ಸಾತರ್ಲೆ, ಬೆಂಗಳೂರಿನ ನಗರ ಮತ್ತು ಗ್ರಾಮೀಣ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕ ಮುರಳಿ ಟಿವಿ, ಬೆಂಗಳೂರು ಕಾನೂನು ಮಾಪನಶಾಸ್ತ್ರದ ಇನ್ಸ್‌ಪೆಕ್ಟರ್ ಎಚ್‌ಆರ್ ನಟರಾಜ್, ಹೊಸಕೋಟೆ ತಾಲ್ಲೂಕು ಕಚೇರಿಯ ಎರಡನೇ ದರ್ಜೆಯ ಸಹಾಯ ಅನಂತ್ ಕುಮಾರ್ ಮತ್ತು ಶಹಾಪುರ ತಾಲ್ಲೂಕು ಕಚೇರಿಯ ಉಮಾಕಾಂತ ಎಂಬುವವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಸ್ಥಿರಾಸ್ತಿಗಳುಮ ನಗದು, ಆಭರಣಗಳು, ದುಬಾರಿ ಬೆಲೆಯ ವಾಹನಗಳು ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ವಶಪಡಿಸಿಕೊಂಡಿದ್ದಾರೆ.