ರಾಜ್ಯದಲ್ಲಿ ಶೀಘ್ರವೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿ

ಬೆಂಗಳೂರು: ದೇಶದಾದ್ಯಂತ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಕೂಗು ಕೇಳಿ ಬರುತ್ತಿದ್ದು, ಈ ಮಧ್ಯೆ ಗೋಹತ್ಯೆ ನಿಷೇಧ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಬಿಜೆಪಿ ಶುಕ್ರವಾರ ತಿಳಿಸಿದೆ.

ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ. ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಸರ್ಕಾರಕ್ಕೆ ಈ ಕುರಿತು ಸಲಹೆ ನೀಡಿದ್ದಾರೆ.

ಇದರ ಬಗ್ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಕೂಡ ಸಚಿವ ಪ್ರಭು ಚೌಹಾಣ್ ಜೊತೆಗೆ ಚರ್ಚೆ ನಡೆಸಿದ್ದಾರೆಂದು ತಿಳಿಸಿದೆ.

ಮುಂದಿನ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಸರ್ಕಾರ ಮಸೂದೆ ಮಂಡಿಸಲಿದೆ. ರಾಜ್ಯದ ಜನತೆಯ ಅಪೇಕ್ಷೆ ಶೀಘ್ರದಲ್ಲೇ ನೆರವೇರಲಿದೆ ಎಂದು ಹೇಳಿದೆ.