ಕರ್ನಾಟಕ ಜಲಸಾರಿಗೆ ಮಂಡಳಿ ವತಿಯಿಂದ ನಾಗರಾಜ ಆರ್ ಅವರಿಗೆ ಬಿಳ್ಕೋಡುಗೆ ಕಾರ್ಯಕ್ರಮ

ಉಡುಪಿ: ಕರ್ನಾಟಕ ಸರಕಾರ ಮೂಲ ಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಕರ್ನಾಟಕ ಜಲಸಾರಿಗೆ ಮಂಡಳಿ ಉಪ ವಿಭಾಗ ಉಡುಪಿ ಇದರ ವತಿಯಿಂದ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜ ಆರ್ ಇವರ ಬಿಳ್ಕೋಡುಗೆ ಸಮಾರಂಭ ಶನಿವಾರ ಹೋಟೆಲ್ ಕಾರ್ತಿಕ್ ಎಸ್ಟೇಟ್ ಸಭಾಂಗಣದಲ್ಲಿ ಜರಗಿತು.

                                                                                                                                                                                               ಇಲಾಖೆಯಲ್ಲಿ ಸುಮಾರು 37 ವರ್ಷಗಳ ಕಾಲ ವಿವಿಧ ಹುದ್ದೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ನಾಗರಾಜ ಆರ್ ದಂಪತಿಗಳನ್ನು ನೂತನವಾಗಿ ಅಧಿಕಾರ ಸ್ವೀಕರಿಸಿದ ಕಾರವಾರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಸಾದ್ ಇವರು ಶಾಲು ಹೊದಿಸಿ ಫಲ ಪುಷ್ಪ, ಸ್ಮರಣಿಕೆ ನೀಡಿ ಗೌರವಿಸಿದರು.                                                                                                                                                                                                                                                                  

ಮಂಗಳೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜೇಶ್, ಗುತ್ತಿಗೆದಾರ ಸಂಘದ ಶ್ರೀನಾಥ್ , ಸಹಾಯಕ ಇಂಜಿನಿಯರ್ ಭಾನುಪ್ರಕಾಶ್, ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು, ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಿಧಿ ಪೈ ನಿರೂಪಿಸಿದರು.