ಕಾರು ಮರಕ್ಕೆ ಢಿಕ್ಕಿ : ನಿವೃತ್ತ ಬ್ಯಾಂಕ್ ನೌಕರ ಸಾವು

ಕುಂದಾಪುರ: ಕಾರೊಂದು ಮರಕ್ಕೆ ಡಿಕ್ಕಿಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ ದಾರುಣ ಘಟನೆ ಕೋಟೇಶ್ವರಹಾಲಾಡಿ ರಸ್ತೆಯ ಕಾಳಾವರ ಗ್ರಾಮದ ಸಳ್ವಾಡಿ ನಡುಬೆಟ್ಟು ಕ್ರಾಸ್ಬಳಿ ಗುರುವಾರ ಸಂಭವಿಸಿದೆ. ಮೊಳಹಳ್ಳಿ ಗ್ರಾಮದ ಕುಂದ್ರಾಡಿ ನಿವಾಸಿ ವಿಜಯ ಬ್ಯಾಂಕ್ ನಿವೃತ್ತ    ನೌಕರ ಶಂಕರ ಶೆಟ್ಟಿ(೬೩) ಸಾವನ್ನಪ್ಪಿದವರು.

ಶಂಕರ್ ಶೆಟ್ಟಿ ತಮ್ಮ ಪತ್ನಿ ಹಾಗೂ ಇಬ್ಬರು ಸಂಬಂಧಿಕರೊಂದಿಗೆ ಸ್ಯಾಂಟ್ರೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಎದುರಿನಿಂದ ಬರುತ್ತಿದ್ದ ಬೈಕಿಗೆ ಢಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಕಾರು ಮರಕ್ಕೆ ಢಿಕ್ಕಿಯಾಗಿದೆ.ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಶಂಕರ್ ಅವರನ್ನು ಕೂಡಲೇ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸುವ ವೇಳೆ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಶಂಕರ್ ಶೆಟ್ಟಿ ಅವರ ಪತ್ನಿಯೂ ಗಾಯಗೊಂಡಿದ್ದು, ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಪತ್ನಿ,ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಬಗ್ಗೆಕುಂದಾಪುರ ಸಂಚಾರಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.