ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ನಾಳೆ ಬಡಾನಿಡಿಯೂರು ಶಾಖೆಯ ನೂತನ ಕಟ್ಟಡ “ಸಹಕಾರ ಸದನ”ದ ಉದ್ಘಾಟನೆ ಸಮಾರಂಭ

ಉಡುಪಿ: ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದ ಬಡಾನಿಡಿಯೂರು ಶಾಖೆಯ ನೂತನ ಕಟ್ಟಡ ಸಹಕಾರ ಸದನವನ್ನು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಅಧ್ಯಕ್ಷ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಮೇ 27ರಂದು ಬೆಳಿಗ್ಗೆ 10ಕ್ಕೆ ಉದ್ಘಾಟಿಸಲಿದ್ದಾರೆ.

ಸಹಕಾರಿ ಸಂಘದ ಅಧ್ಯಕ್ಷ ಟಿ.ಸತೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ದೀಪ ಪ್ರಜ್ವಲನೆ ಮಾಡಲಿದ್ದಾರೆ. ತೊಟ್ಟಂ ಸೈಂಟ್ ಅನ್ಸ್ ಚರ್ಚ್ ಧರ್ಮಗುರು ರೆ|ಫಾ|ಡೆನಿಸ್ ದೇಸಾ ಆಶೀರ್ವಚನ ಮಾಡಲಿದ್ದಾರೆ. ಶಾಸಕ ಯಶ್ ಪಾಲ್ ಸುವರ್ಣ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹವಾನಿಯಂತ್ರಣ ಶಾಖೆಯನ್ನು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭದ್ರತಾ ಕೊಠಡಿಯನ್ನು, ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು ವಸತಿ ಗೃಹ, ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಅವರು ಗೋದಾಮು, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿಯವರು ಗ್ರಾಹಕರ ಭದ್ರತಾ ಕೊಠಡಿ ಉದ್ಘಾಟಿಸಲಿರುವರು.

ಗ್ರಾ.ಪಂ. ಅಧ್ಯಕ್ಷ ಪ್ರಭಾಕರ ತಿಂಗಳಾಯ, ಸಹಕಾರ ಸಂಘಗಳ ಉಪನಿಬಂಧಕ ರಮೇಶ್, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್‌.ವಿ., ಬಾಲಾಜಿ ಕ್ಯಾಟರರ್ಸ ಅಶೋಕ್ ಕೋಟ್ಯಾನ್, ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಡಾ|ದೇವಿ ಪ್ರಸಾದ ಶೆಟ್ಟಿ ಬೆಳಪು, ಅಶೋಕ ಕುಮಾರ್ ಶೆಟ್ಟಿ, ರಾಜೇಶ್ ರಾವ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಸಂಸ್ಥೆಯ ಉಪಾಧ್ಯಕ್ಷ ಬಿ.ಅಫ್ಜಲ್ ಸಾಹೇಬ್, ಸಿಇಒ ಮಹೇಶ್ ಸಾಲ್ಯಾನ್ ತಿಳಿಸಿದ್ದಾರೆ.

ಸದಸ್ಯರಿಗೆ ಶೇ. 16 ಡಿವಿಡೆಂಡ್:

ಸಂಸ್ಥೆಯು ಮುಂದಿನ ವರ್ಷ ಶತಮಾನೋತ್ಸವ ಆಚರಿಸಲಿದ್ದು, ಪ್ರಸ್ತುತ ಸಾಲಿನಲ್ಲಿ 1.48 ಕೋಟಿ ರೂ. ಪಾಲು ಬಂಡವಾಳ ಹೊಂದಿದ್ದು 86.48 ಕೋಟಿ ರೂ. ಠೇವಣಿ 66.38 ಕೋಟಿ ರೂ. ಸಾಲ ನೀಡಿದೆ. ಶೇ.97% ರಷ್ಟು ವಸೂಲಾತಿ ಮಾಡಲಾಗಿದೆ. 33.64 ಕೋಟಿ ರೂ. ಹೂಡಿಕೆ ಮಾಡಿ ಸದಸ್ಯರಿಗೆ ಶೇ. 16 ಡಿವಿಡೆಂಡ್ ನೀಡಲಾಗಿದೆ. ಈಗಾಲೇ ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘವು ಕಲ್ಯಾಣಪುರ, ಬಡಾನಿಡಿಯೂರು, ಕೆಳಾರ್ಕಳಬೆಟ್ಟು, ಹೂಡೆ ಸಾಖೆಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.