ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶ್ರೀಕೃಷ್ಣಮಠಕ್ಕೆ ಭೇಟಿ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಕೇಂದ್ರ ಸರ್ಕಾರದ  ರಕ್ಷಣಾ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಇವರು ಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಬಿ.ಜೆ.ಪಿ ಮುಖಂಡರಾದ ಉದಯಕುಮಾರ್ ಶೆಟ್ಟಿ, ಶ್ರೀಶ ನಾಯಕ್, ಪ್ರದೀಪ್ ರಾವ್, ವಿಜಯ್ ಭಟ್, ಭಾರತಿಶೆಟ್ಟಿ, ಸುವರ್ಧನ್ ನಾಯಕ್, ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.