ಕೊಡೇರಿ ನಾಡದೋಣಿ ದುರಂತ: ಸಚಿವ ಕೋಟರಿಂದ ಮೃತ ಮೀನುಗಾರರ ಕುಟುಂಬಗಳಿಗೆ ತಲಾ 6 ಲಕ್ಷ ರೂ. ಪರಿಹಾರ ಮೊತ್ತ ವಿತರಣೆ

ಬೈಂದೂರು: ಇಲ್ಲಿನ ಕೊಡೇರಿ ಸಮೀಪ ಈಚೆಗೆ ನಡೆದ ಮೀನುಗಾರಿಕೆಗೆ ತೆರಳಿದ ನಾಡದೋಣಿ ದುರಂತದಲ್ಲಿ ಮೃತರಾದ ನಾಲ್ವರು ಮೀನುಗಾರರ ಮನೆಗಳಿಗೆ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ, ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ತಲಾ 6 ಲಕ್ಷ ರೂ. ಮೊತ್ತದ ಆದೇಶ ಪ್ರತಿಯನ್ನು ಕುಟುಂಬದವರಿಗೆ ಹಸ್ತಾಂತರ ಮಾಡಿದರು.
ಸಚಿವರಿಗೆ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಸಾಥ್ ನೀಡಿದರು.
ಬೈಂದರೂ ತಾಲೂಕು ಪಂಚಾಯತ್ ಅಧ್ಯಕ್ಷ ಮಹೇಂದ್ರ ಪೂಜಾರಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮೊದಲಾದ ಮುಖಂಡರು ಉಪಸ್ಥಿತರಿದ್ದರು.