ಡಿ.22: ಕೊಂಕಣಿ ಸಾಹಿತ್ಯ ಅಕಾಡೆಮಿಯ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಕಾರ್ಕಳ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಜತ ಮಹೋತ್ಸವದ ಆಚರಣೆಯ ಕುರಿತು ಪೂರ್ವಭಾವಿ ಸಮಾಲೋಚನೆಯ ಸಭೆಯನ್ನು ಡಿ. 22: ರಂದು ಕಾರ್ಕಳ ಶಾಸಕ  ವಿ. ಸುನಿಲ್ ಕುಮಾರ್‌ ಅಧ್ಯಕ್ಷತೆಯಲ್ಲಿ ಕಾರ್ಕಳದ ಎಸ್.ವಿ.ಟಿ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ಅಪರಾಹ್ನ 3.30 ಕ್ಕೆ ಆಯೋಜಿಸಲಾಗಿದೆ.

ಈ ಸಭೆಯಲ್ಲಿ ಕೊಂಕಣಿ ಸಾಹಿತ್ಯಕ್ಕೆ ಸಂಬಂಧಪಟ್ಟ ಮಿತ್ರರು ಆಗಮಿಸುವಂತೆ  ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ| ಕೆ. ಜಗದೀಶ್ ಪೈ  ತಿಳಿಸಿದ್ದಾರೆ.