ಕೋಟ: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ಕೋಟ: ನಿನ್ನೆ ನಾಪತ್ತೆಯಾಗಿದ್ದ ವಕ್ವಾಡಿ ನವನಗರ ನಿವಾಸಿ ರವಿಚಂದ್ರ ಕುಲಾಲ್ (33) ಶವ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ.

ಕುಂದಾಪುರ ತಾಲೂಕಿನ ವಕ್ವಾಡಿ-ಕಾಳಾವರ ರಸ್ತೆ ಸಮೀಪದ ಸರಕಾರಿ ಹಾಡಿಯಲ್ಲಿ ರವಿಚಂದ್ರನ ಶವ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ತನ್ನ ಆಟೋ ರಿಕ್ಷಾವನ್ನು ವಕ್ವಾಡಿ ನವನಗರ ತಿರುವಿನಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದನು.

ರವಿಚಂದ್ರ ಹಾಕಿದ್ದ ವಾಟ್ಸಾಪ್ ಸ್ಟೇಟಸ್ ನಿಂದ ಅನುಮಾನಗೊಂಡ ಸ್ನೇಹಿತರು ಹಾಗೂ ಮನೆಯವರು ಸತತವಾಗಿ ಕರೆ ಮಾಡಿದ್ದರು. ಆದರೆ, ರವಿಚಂದ್ರ ಯಾವುದೇ ಕರೆ ಸ್ವೀಕರಿಸಿರಲಿಲ್ಲ. ಕೊನೆಗೆ ಸ್ನೇಹಿತರು, ಮನೆಯವರು ಸೇರಿ ಹುಡುಕಾಟ ನಡೆಸಿದ್ದು, ಇಂದು ಬೆಳಿಗ್ಗೆ ಹಾಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರವಿಚಂದ್ರ ಕುಲಾಲ್ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ‌ ತಿಳಿದುಬಂದಿಲ್ಲ.

ರವಿಚಂದ್ರ ವಿವಾಹಿತನಾಗಿದ್ದು, 8 ತಿಂಗಳ ಗಂಡು ಮಗುವಿದೆ. ತಂದೆ, ತಾಯಿ ಹಾಗೂ ಮೂವರು ಸೋದರರನ್ನು ಅಗಲಿದ್ದಾರೆ.