ಕೋವಿಡ್: ರಾಜ್ಯದ ಆರು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲು

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 589 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಕೋವಿಡ್–19 ದೃಢಪಟ್ಟವರ ಒಟ್ಟು ಸಂಖ್ಯೆ 29,76,589ರಷ್ಟಾಗಿದೆ.

ರಾಜ್ಯದಲ್ಲಿ ಇಂದು 13 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದು, ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,807ಕ್ಕೆ ಏರಿದೆ
ಇದೇ ಅವಧಿಯಲ್ಲಿ 887 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ. ಈವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 29,26,284 ರಷ್ಟಾಗಿದೆ. ರಾಜ್ಯದಲ್ಲಿ ಸದ್ಯ 12,469 ಸಕ್ರಿಯ ಪ್ರಕರಣಗಳಿವೆ.

ಕೋವಿಡ್ ದೃಢಪಡುತ್ತಿರುವ ಶೇಕಡಾವಾರು ಪ್ರಮಾಣ 0.46 ರಷ್ಟಾಗಿದ್ದು, ಸಾವಿನ ದರ ಶೇಕಡಾ 2.20ರಷ್ಟಿದೆ.

ಆರು ಜಿಲ್ಲೆಗಳಲ್ಲಿ ಶೂನ್ಯ ಕೇಸ್:
86 ಪ್ರಕರಣ ದೃಢಪಡುವುದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ವಿಜಯಪುರ, ಯಾದಗಿರಿ, ಕಲಬುರಗಿ, ಗದಗ, ಬೀದರ್, ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಯಾವುದೇ ಕೋವಿಡ್ ಪ್ರಕರಣ ದೃಢಪಟ್ಟಿಲ್ಲ.