ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ತರ ಯೋಜನೆಯಾದ
ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದಲ್ಲಿ
ಪಾಲ್ಗೊಳ್ಳಲು ಮೈಸೂರಿನ ಯದುವೀರಕೃಷ್ಣದತ್ತ ಚಾಮರಾಜ ಒಡೆಯರು ಮಠಕ್ಕೆ ಆಗಮಿಸಿದಾಗ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ಸನ್ಮಾನಿಸಿ ಅನುಗ್ರಹಿಸಿದರು.

















