ಉಡುಪಿ: ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಗಿಡನೆಡುವ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ: ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಪರಿಸರದ ಕಾಳಜಿಯಿಂದ ಸಕಾಲಿಕ ಮಳೆಗಾಗಿ  ಹಸಿರನ್ನು ಉಳಿಸಿ ಬೆಳೆಸುವ ದೃಷ್ಟಿಯಿಂದ ಗಿಡಗಳನ್ನು ನೆಟ್ಟು ರಕ್ಷಿಸಿ ಮರಗಳನ್ನಗಿಸುವ ಜವಾಬ್ದಾರಿಯನ್ನಿಟ್ಟುಕೊಂಡು, ಪರಿಸರದಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಅದಮಾರು ಮಠದಲ್ಲಿ  ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಚಾಲನೆ ನೀಡಿದರು.

ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು,ಅದಮಾರು ಕಿರಿಯ  ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಉಪಸ್ಥಿತರಿದ್ದು ಸಸಿಗಳನ್ನು ನೆಟ್ಟರು.ಪಲಿಮಾರು ಮಠದ ದಿವಾನರಾದ ವೇದವ್ಯಾಸ ತಂತ್ರಿಗಳು,ಅದಮಾರು ಮಠದ ದಿವಾನರಾದ ಲಕ್ಷ್ಮೀನಾರಾಯಣ ಮುಚ್ಚಿನ್ತಯರು,ಆನಂದ ಸಮಿತಿಯ  ಗೋವಿಂದರಾಜ್,ಚೇತನ್ ಐತಾಳ್,ರೋಹಿತ್ ತಂತ್ರಿ ಹಾಗೂ ಹರೀಶ್ ಬೈಲಕೆರೆ ಮೊದಲಾದ ಮಠದ ಅಭಿಮಾನಿಗಳು ಭಾಗವಹಿಸಿದ್ದರು.