ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಮುಖ್ಯಮಂತ್ರಿಯವರ ಮಾಜಿ ಕಾನೂನು ಸಲಹೆಗಾರರಿಂದ ಸಂವಾದ ಕಾರ್ಯಕ್ರಮ

ಕುಂದಾಪುರ: ಕುಂದೇಶ್ವರ ದೇವಸ್ಥಾನ ರಸ್ತೆಯ ಉತ್ತಮ್ ಕ್ಲಿನಿಕ್ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿಯಲ್ಲಿ ಮುಖ್ಯ ಮುಖ್ಯಮಂತ್ರಿಯವರ ಮಾಜಿ ಕಾನೂನು ಸಲಹೆಗಾರ ಕೆ. ದಿವಾಕರ ಅವರು ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಬಹಳಷ್ಟು ಶ್ರಮವಹಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಮೊಬೈಲ್ ಗಳಿಗೆ ತಮ್ಮ ಸಮಯವನ್ನು ವ್ಯರ್ಥ ಮಾಡುವುದರಿಂದ ಕ್ರಿಯಾಶೀಲತೆ ವ್ಯರ್ಥವಾಗುತ್ತದೆ ಆದ್ದರಿಂದ ಮೊಬೈಲ್ ಅವಲಂಬನೆ ಕಡಿಮೆ ಮಾಡಿ ಅಗತ್ಯಕ್ಕೆ ತಕ್ಕಂತೆ ಬಳಸಬೇಕು ಎಂದರು.
 ಸಂಸ್ಥೆಯು ಈ ವರ್ಷ ಆರಂಭಿಸಿರುವ ನೀಟ್/ ಜಿ.ಇ.ಇ ಮೈನ್ ತರಗತಿಗೆ ಶುಭಹಾರೈಸಿ ಸಂಸ್ಥೆ ಹೆಮ್ಮರವಾಗಿ ಬೆಳೆಯಲಿ, ಸಂಸ್ಥೆಯಿಂದ ಕಲಿತ ವಿದ್ಯಾರ್ಥಿಗಳು ಜೀವನದಲ್ಲಿ ಬೆಳಗಲಿ ಎಂದರು.
ಸಂಸ್ಥೆಯ ಮುಖ್ಯಸ್ಥರಾದ ಭರತ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯಸ್ಥರಾದ ಪ್ರತಾಪಚಂದ್ರ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅಂಕಿತಾ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಪ್ರೀತಾ ಶೆಟ್ಟಿ ವಂದಿಸಿದರು.